ಸ್ಥಳೀಯರು ಮತ್ತು ಪರಿಸರವಾದಿಗಳ ವಿರೋಧಕ್ಕೆ ಮಣಿದ ರಾಜ್ಯ ಸರ್ಕಾರ, ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟಿದೆ.
ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಬುಧವಾರ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಕ್ತರ ಮತ್ತು ಸ್ಥಳೀಯರ ಭಾವನೆಗಳನ್ನು ಪರಿಗಣಿಸಿ ಚಾಮುಂಡಿ ಬೆಟ್ಟಕ್ಕೆ ರೋಪ್ವೇ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದರು. ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರಿಗಿಂತ ಭಕ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಮೆಟ್ಟಿಲುಗಳ ಜತೆಗೆ ಹಲವಾರು ಕಡೆಯಿಂದ ಬೆಟ್ಟಕ್ಕೆ ದಾರಿ ಇದೆ. ಬಸ್ ಸೌಲಭ್ಯವೂ ಇದೆ. ಹಾಗಾಗಿ ರೋಪ್ ವೇ ಯೋಜನೆಯನ್ನು ಕೈ ಬಿಡಲಾಗಿದೆ ಎಂದು ಹೇಳಿದರು.