ವೈಮಾನಿಕ ನಿಯಂತ್ರಕ ಡಿಜಿಸಿಎ ಸ್ಪೈಸ್ ಜೆಟ್ ವಿಮಾನ ಸಂಸ್ಥೆಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ.
ಸಂಸ್ಥೆಯ ವಿಮಾನಗಳಲ್ಲಿ 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ನೊಟೀಸ್ ನೀಡಲಾಗಿದೆ
ಏರ್ ಕ್ರಾಪ್ಟ್ ನಿಯಮಗಳ ರೂಲ್ 134 ಹಾಗೂ ಷೆಡ್ಯೂಲ್ XI, 1937 ರ ಪ್ರಕಾರ ಸುರಕ್ಷಿತ, ಸಮರ್ಥ ಮತ್ತು ವಿಶ್ವಾಸಾರ್ಹ ವಾಯು ಸೇವೆಗಳನ್ನು ಸ್ಥಾಪಿಸುವುದಕ್ಕೆ ಸ್ಪೈಸ್ ಜೆಟ್ ವಿಫಲವಾಗಿದೆ ಎಂದು ಡಿಜಿಸಿಎ ನೀಡಿರುವ ನೊಟೀಸ್ ನಲ್ಲಿ ಹೇಳಿದೆ. ಇದನ್ನು ಓದಿ – ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಘಟನೆಯ ಪರಿಶೀಲನೆ ಮೂಲಕ ಆಂತರಿಕ ಸುರಕ್ಷತೆ ಕಳಪೆಯಾಗಿರುವುದು ಹಾಗೂ ಅಸಮರ್ಪಕ ನಿರ್ವಹಣೆ ಕ್ರಮಗಳನ್ನು ತೋರುತ್ತಿದೆ ಎಂದು ಡಿಜಿಸಿಎ ಹೇಳಿದೆ.
ನೊಟೀಸ್ ಗೆ ಪ್ರತಿಕ್ರಿಯೆ ನೀಡುವುದಕ್ಕೆ ವಿಮಾನ ಸಂಸ್ಥೆಗೆ ಮೂರು ವಾರಗಳ ಕಾಲಾವಕಾಶ ನೀಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ
ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಆರ್ಸಿಪಿ ಸಿಂಗ್ ಅವರು ತಮ್ಮ ರಾಜ್ಯಸಭೆಯ ಅವಧಿ ಪೂರ್ಣಗೊಳ್ಳುವ ಒಂದು ದಿನ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ
ಹಿಂದಿನ ದಿನ, ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶಕ್ಕೆ ನೀಡಿದ ಕೊಡುಗೆಗಾಗಿ ಕ್ಯಾಬಿನೆಟ್ ಸಭೆಯಲ್ಲಿ ನಖ್ವಿ ಮತ್ತು ಸಿಂಗ್ ಇಬ್ಬರನ್ನೂ ಶ್ಲಾಘಿಸಿದರು, ಇದು ಅವರ ಅಂತಿಮ ಕ್ಯಾಬಿನೆಟ್ ಸಭೆಯಾಗಿದೆ
ರಾಜ್ಯಸಭಾ ಸಂಸದರಾಗಿ ತಮ್ಮ ಅವಧಿ ಗುರುವಾರ ಕೊನೆಗೊಳ್ಳಲಿದ್ದು, ಶುಕ್ರವಾರದಿಂದ ಸಂಸದರ ಹುದ್ದೆ ಮುಕ್ತಾಯವಾಗುವ ಕಾರಣ ಸಾಂವಿಧಾನಿಕ ಹೊಣೆಗಾರಿಕೆ ಅರಿತು ಇಬ್ಬರೂ ಸಚಿವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕರಾಗಿರುವ ನಖ್ವಿ ರಾಜ್ಯಸಭೆಯ ಉಪನಾಯಕರೂ ಆಗಿದ್ದಾರೆ. ಸಿಂಗ್ ಅವರು ಜೆಡಿಯು ಕೋಟಾದಿಂದ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ