ಸನ್ನಡತೆ ಆಧಾರದ ಮೇಲೆ ಸ್ವಾತಂತ್ರ್ಯ ದಿನದ ಅಂಗವಾಗಿ 84 ಕೈದಿಗಳನ್ನು ಬಿಡುಗಡೆ ಮಾಡಲಾಗುವುದು.ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ತಿಳಿಸಿದ್ದಾರೆ.
ಜೈಲಲ್ಲಿ ಅಕ್ರಮಗಳ ಕುರಿತು ಇಂದು ಮಾತನಾಡಿದ ಅವರು, ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮಕೈಗೊಳ್ಳಲಾಗಿದೆ.ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ಬಹುತೇಕ ಹೊಸ ಸಿಬ್ಬಂದಿಗಳು ಇದ್ದಾರೆ. ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ, ಎಲ್ಲವನ್ನು ಹಿಡಿಯುತ್ತಿದ್ದಾರೆ ಎಂದು ತಿಳಿಸಿದರು.ಇದನ್ನು ಓದಿ –ಕಿರ್ಗಿಸ್ತಾನ್ ಟ್ರೆಕ್ : ಪ್ರವಾಸಿಗರ ಕಡೆಗೆ ಹಿಮಪಾತದ ಅದ್ಭುತ ಕ್ಷಣ: ಕ್ಯಾಮರಾದಲ್ಲಿ ಸೆರೆ
ಆಜಾದಿ ಕಾ ಅಮೃತ ಮಹೋತ್ಸವ ದಿನದ ಅಂಗವಾಗಿ ನಮ್ಮ 1 ಲಕ್ಷದ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ತಿರಂಗ ಹಾರಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವರು ತಿಳಿಸಿದ್ದಾರೆ.
ಪಿಎಸ್ಐ ಅಕ್ರಮದ ತನಿಖೆಯನ್ನು ಅತ್ಯಂತ ಗಂಭೀರವಾಗಿ ತನಿಖೆ ಮಾಡಿಸುತ್ತಿದ್ದೇವೆ. ಸಿಐಡಿಗೆ ಯಾವುದೇ ಒತ್ತಡ ಕೊಟ್ಟಿಲ್ಲ ಅವರಿಗೆ ನಾವು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಇಡೀ ದೇಶದಲ್ಲೇ ಮೊದಲು ತಪ್ಪಿತಸ್ಥ ಐಪಿಎಸ್ ಅಧಿಕಾರಿಯನ್ನು ಬಂಧಿಸಿದ್ದೇವೆ. ಆದರೆ ಇದರಲ್ಲಿ ಯಾರೇ ಆದರೂ ರಾಜಕೀಯ ಲಾಭ ಪಡೆದುಕೊಳ್ಳಬಾರದು ಎಂದರು.
ಸಮಯ ಬಂದಾಗ ಯಾವುದೇ ಇತರ ಪ್ರಕರಣದ ತನಿಖೆ ಮಾಡುವುದು ತಪ್ಪಲ್ಲ. ನಮ್ಮ ಕಣ್ಣ ಮುಂದೆ ಇರುವುದು ಸದ್ಯ ಪಿಎಸ್ ಐ ಹಗರಣದ ತನಿಖೆ. ಮಧ್ಯವರ್ತಿ, ಹಣ ಕೊಟ್ಟವರ ವಿರುದ್ಧವೂ ಕ್ರಮ ಆಗುತ್ತಿದೆ. ಇನ್ನೊಮ್ಮೆ ಪರೀಕ್ಷೆಯಲ್ಲಿ ಇಂತಹ ಘಟನೆ ಆಗಬಾರದು. ತನಿಖೆ ಆಗುತ್ತಿದೆ, ಯಾವುದೇ ಊಹೆಯ ಮಾತು ಹೇಳಲ್ಲ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು