ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ದೆಹಲಿಯ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಮುಂದೆ ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಹುಲ್ ಗಾಂಧಿ 5 ದಿನಗಳ ವಿಚಾರಣೆ ಎದುರಿಸಿದ್ದರು. ಸೋನಿಯಾಗಾಂಧಿ ಅವರಿಗೂ ವಿಚಾರಣೆ ಬರುವಂತೆ 2 ಬಾರಿ ಸಮನ್ಸ್ ನೀಡಲಾಗಿತ್ತು.
ಕೋವಿಡ್ ಸೇರಿದಂತೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿನ್ನೆಲೆ ವಿಚಾರಣೆ ಮುಂದೂಡಲು ಸೋನಿಯಾಗಾಂಧಿ ಮನವಿ ಮಾಡಿದ್ದರು. ಇದಕ್ಕೆ ಸಹಕರಿಸಿದ್ದ ಅಧಿಕಾರಿಗಳು ಇಂದಿಗೆ ದಿನಾಂಕ ನಿಗದಿ ಮಾಡಿದ್ದರು.ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್
ಸೋನಿಯಾ ನಿರ್ದೇಶನದಂತೆ ಅಸೋಸಿಯೇಟೆಡ್ ಜರ್ನಲ್ಸ್ ಲಿ. ಯಂಗ್ ಇಂಡಿಯಾ ಖರೀದಿ ನಡೆದಿದೆ. ವ್ಯವಹಾರಗಳ ಪ್ರತಿ ಹಂತದಲ್ಲೂ ಸೋನಿಯಾಗಾಂಧಿ ಉಪಸ್ಥಿತಿ ಇದ್ದು. ರಾಹುಲ್ ಗಾಂಧಿಗೆ ಹಳೆ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಸೋನಿಯಾಗಾಂಧಿ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಪ್ರತಿಭಟನೆ :
ಈ ನಡುವೆ ಸೋನಿಯಾಗಾಂಧಿ ವಿಚಾರಣೆ ಖಂಡಿಸಿ ದೆಹಲಿ, ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.
ರಾಹುಲ್ ವಿಚಾರಣೆ ವೇಳೆ ನಡೆಸಿದ ಪ್ರತಿಭಟನೆ ಮಾದರಿಯಲ್ಲಿ ಇವತ್ತೂ ಬೀದಿಗಿಳಿಯಲು ಪಕ್ಷ ತೀರ್ಮಾನಿಸಿದೆ. ದೆಹಲಿಯಲ್ಲಿ ಭಾರೀ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ