February 22, 2026

Newsnap Kannada

The World at your finger tips!

car fire

ತಮ್ಮ ಕಾರುಗಳಿಗೆ ತಾವೇ ಬೆಂಕಿ ಹಾಕಿಕೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು

Spread the love

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್‌ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಬೆಂಗಳೂರಿನಲ್ಲಿ ಎರಡು ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಶಾಂತಿ ನಗರ ವಿಲ್ಸನ್ ಗಾರ್ಡನ್ ಹಾಗೂ ಶೇಷಾದ್ರಿಪುರಂ ಬಳಿ ಕಾರುಗಳಿಗೆ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ
ವ್ಯಕ್ತಪಡಿಸಿದ್ದಾರೆ. ಅಪಾರ್ಟ್ ಮೆಂಟ್ ಗೋಡೆ ಕುಸಿದು : ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

ಆರಂಭದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವುದು ತಿಳಿದು ಬಂದಿರಲಿಲ್ಲ. ನಂತರ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಕಾರ್ಯಕರ್ತರೇ ತಮ್ಮ ಕಾರುಗಳಿಗೆ ಬೆಂಕಿ ಹಚ್ಚು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಎರಡು ಕಾರುಗಳಿಗೆ ಬೆಂಕಿ ಹಾಕಿದ್ದಾರೆ. ಅವರ ಕಾರಿಗೆ ಅವರೇ ತಂದು ಬೆಂಕಿ ಹಾಕಿದ್ದಾರೆ. ಇದನ್ನು ನಾನು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿದ ವ್ಯಕ್ತಿ ಈ ರೀತಿ ಮಾಡಿದ್ದಕ್ಕೆ ಕೋಪಗೊಂಡು ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದರು.

error: Content is protected !!