ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಭಾರತದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ನಡೆದ ಮತದಾನದ ಮತಏಣಿಕೆ ಕಾರ್ಯ ನಡೆಯಿತು. ಮೊದಲ ಸುತ್ತಿನಿಂದ, ಕೊನೆಯ ಸುತ್ತಿನವರೆಗೂ ಮುನ್ನಡೆಯನ್ನು ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಕಾಯ್ದುಕೊಂಡಿದ್ದರು. ಇದೀಗ ದ್ರೌಪದಿ ಮುರ್ಮು ಭಾರತದ ನೂತನ ರಾಷ್ಟ್ರಪತಿ, ಪ್ರತಿಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಸೋಲಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು, ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ ಮತ್ತು ಪಂಜಾಬ್ ರಾಜ್ಯಗಳಿವೆ. ಈ ಸುತ್ತಿನಲ್ಲಿ, ಒಟ್ಟು ಮಾನ್ಯ ಮತಗಳು 1,333. ಮಾನ್ಯ ಮತಗಳ ಒಟ್ಟು ಮೌಲ್ಯ 1,65,664. ದ್ರೌಪದಿ ಮುರ್ಮು 812, ಯಶವಂತ್ ಸಿನ್ಹಾ 521 ಮತಗಳನ್ನು ಪಡೆದಿದ್ದಾರೆ ಎಂದು ತಿಳಿಸಿದರು.
ತಮ್ಮ ಕಾರುಗಳಿಗೆ ತಾವೇ ಬೆಂಕಿ ಹಾಕಿಕೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು
ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮೂರನೇ ಸುತ್ತಿನ ಮತ ಎಣಿಕೆಯ ಕೊನೆಯಲ್ಲಿ ಒಟ್ಟು ಮಾನ್ಯ ಮತಗಳಲ್ಲಿ 50% ಗಡಿ ದಾಟಿದ್ದಾರೆ. ದೇಶದ ರಾಷ್ಟ್ರಪತಿಯಾಗಲು ಸಜ್ಜಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ