March 14, 2026

Newsnap Kannada

The World at your finger tips!

trail trust

ಮಂಡ್ಯ – ಪಾಂಡವಪುರ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್ – ರೈತರ ವಿರೋಧ

Spread the love

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಸರ್ಕಾರದ ಒಪ್ಪಿಗೆ ಪಡೆದು ಜಿಲ್ಲಾಡಳಿತ ಮತ್ತೆ ಟ್ರಯಲ್ ಬ್ಲಾಸ್ಟ್ ಗೆ ದಿನಾಂಕ ನಿಗದಿ ಮಾಡಿದೆ.ವಿರೋಧದ ನಡುವೆಯೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್ ಗೆ ಸಿದ್ಧತೆ ಮಾಡಿಕೊಂಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಜುಲೈ 25ರಿಂದ 31ರವರಿಗೆ ಜಾರ್ಖಂಡ್ ನ ವಿಜ್ಞಾನಿಗಳ ತಂಡದಿಂದ ಬ್ಲಾಸ್ಟಿಂಗ್ ಮೂಲಕ ಪರೀಕ್ಷೆ ನಡೆಸಲಿದ್ದಾರೆ. KRS ಡ್ಯಾಂಗೆ ಅಪಾಯ ಇದೆಯೋ ಇಲ್ಲವೋ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಟ್ರಯಲ್ ಬ್ಲಾಸ್ಟ್ ನಡೆಸಲು ಈ ಸಿದ್ಧತೆ ಮಾಡಿಕೊಳ್ಳಲಾಗಿದೆ.ರಾಜಕೀಯ ಪ್ರವೇಶದ ಸುಳಿವು ನೀಡಿದ ಸೋನಿಯಾ ಅಳಿಯ ರಾಬರ್ಟ್

KRS ಡ್ಯಾಂಗೆ ಗಂಡಾತರದ ಭೀತಿಯಿಂದ ಬೇಬಿ ಬೆಟ್ಟದಲ್ಲಿ 3 ವರ್ಷದಿಂದ ಗಣಿಗಾರಿಕೆ ನಿಷೇಧಿಸಲಾಗಿತ್ತು. ಆದರೆ, ಗಣಿ ಮಾಲೀಕರ ಒತ್ತಡಕ್ಕೆ ಮಣಿದು ಪ್ರಯೋಗ ನಡೆಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ರೈತರು ಆರೋಪಿಸಿದ್ದಾರೆ.

error: Content is protected !!