ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳು ದೀದಿ ನಾಡಲ್ಲಿ ಸಚಿವರಿಗೆ ಶಾಕ್ ಕೊಟ್ಟಿದೆ.
ರಾಶಿ ರಾಶಿ ಗುಡ್ಡೆ ಹಾಕಿರುವ ಹಣ. ಭ್ರಷ್ಟ ಸಚಿವನ ಆಪ್ತೆ ಮನೆಯಲ್ಲಿ ಸಿಕ್ಕಿರುವ ಅಕ್ರಮ ಸಂಪತ್ತು.
ದೀದಿ ನಾಡಲ್ಲಿ ಜನರ ತೆರಿಗೆ ದುಡ್ಡಲ್ಲಿ ತಗೊಂಡ ಐಷಾರಾಮಿಯಾಗಿದ್ದ ಮಮತಾ ಬ್ಯಾನರ್ಜಿ ಕ್ಯಾಬಿನೆಟ್ನ ಸೈನಿಕನ ಬೇಟೆಯಾಡಿದೆ.

ಬೇಟೆಗೆ ಇಳಿಯುವ ಮೊದಲು ಭ್ರಷ್ಟರ ಲಿಸ್ಟ್ ಮಾಡಿಟ್ಟುಕೊಂಡಿದ್ದ ಅಧಿಕಾರಿಗಳು ರಣಹದ್ದಿನಂತೆ ಅಖಾಡಕ್ಕಿಳಿದಿದ್ದರು. ಪಕ್ಕಾ ಪ್ಲಾನ್ ಮಾಡಿಕೊಂಡು ಏಕಾಏಕಿ ದಾಳಿ ಮಾಡಿದರು. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಆಸ್ತಿ-ಪಾಸ್ತಿ ಮೇಲೆ ದಾಳಿ ಮಾಡಿದ್ದಾರೆ.
ದೀದಿ ಸಂಪುಟದ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಮನೆ ಮೇಲೆ ಇ.ಡಿ ದಾಳಿ ನಡೆಸಿದೆ ಈ ವೇಳೆ ಬರೋಬ್ಬರಿ 20 ಕೋಟಿ ಹಣ ಪತ್ತೆಯಾಗಿದೆ. ಬಂಗಾಳದ ನಕ್ಟಾಳಾದ ಮನೆಯಲ್ಲಿ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ. ಅರ್ಪಿತಾ ಮುಖರ್ಜಿಗೆ ಸಂಬಂಧಿಸಿದ ಸ್ಥಳಗಳಲ್ಲಿ 20ಕ್ಕೂ ಅಧಿಕ ಮೊಬೈಲ್ ಫೋನ್ಗಳನ್ನೂ ಜಪ್ತಿ ಮಾಡಲಾಗಿದೆ. ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ-ಕ್ಷೇತ್ರ ತ್ಯಾಗ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ
ಶಿಕ್ಷಕರ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿತ್ತು. ಈ ಹಗರಣದಲ್ಲಿ ಕೋಟಿ ಕೋಟಿ ಹಣ ನುಂಗಿದ್ದ ಆರೋಪದಲ್ಲಿ ಸದ್ಯ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ಮಾಡಿದೆ.
ಇ.ಡಿ ಅಧಿಕಾರಿಗಳಿಗೆ ಸಿಕ್ಕಿರುವ ಕಂತೆ ಕಂತೆ ಹಣ, ಕೆಜಿಗಟ್ಟಲೇ ಚಿನ್ನಾಭರಣ. ಎಕರೆ ಗಟ್ಟಲೇ ಆಸ್ತಿ ಪತ್ರಗಳು ಅಕ್ರಮವೋ? ಸಕ್ರಮವೋ ಎಂಬ ದಾಖಲೆಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ