ನಟ ಧ್ರುವ ಸರ್ಜಾ ಅವರ ಅಜ್ಜಿ, ಅರ್ಜುನ್ ಸರ್ಜಾ ರ ತಾಯಿ ಲಕ್ಷ್ಮೀದೇವಿ (84) ಇಂದು ನಿಧನರಾದರು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.
ಲಕ್ಷ್ಮೀದೇವಿ ಅವರನ್ನು ಕಳೆದ 22 ದಿನಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ – ಶಿಕ್ಷಕರ ನೇಮಕಾತಿ ಹಗರಣ – WB ಟಿಎಂಸಿ ಸಚಿವ ಪಾರ್ಥ ಚಟರ್ಜಿ ಬಂಧನ
ಅಮ್ಮನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಬೆಂಗಳೂರಿನಲ್ಲಿಯೇ ಇದ್ದಾರೆ ಧ್ರುವ ಸರ್ಜಾ, ಮಾರ್ಟಿನ್ ಚಿತ್ರದ ಚಿತ್ರೀಕರಣ ಹಿನ್ನೆಲೆಯಲ್ಲಿ ಹೈದ್ರಾಬಾದ್ನಲ್ಲಿ ಇದ್ದಾರೆ.
- ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು
- ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು
- ಪ್ರೀತಿಯೆಂದರೆ…. ಇಷ್ಟೇನಾ
- ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್ಐಟಿ
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
ಶಿಕ್ಷಕರ ನೇಮಕಾತಿ ಹಗರಣ – W B ಟಿಎಂಸಿ ಸಚಿವ ಪಾರ್ಥ ಚಟರ್ಜಿ ಬಂಧನ
ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ.
ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿ, 9 ರಿಂದ 12ನೇ ತರಗತಿಗಳ ಸಹಾಯಕ ಶಿಕ್ಷಕರು ಹಾಗೂ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತ್ತು.
ಈ ನಿರ್ದೇಶನದ ಮೇರೆಗೆ ನಿನ್ನೆ ಚಟರ್ಜಿ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಇಂದು ಬಂಧನಕ್ಕೊಳಪಡಿಸಿದೆ.
ಪ್ರಸ್ತುತ ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (WBSSC) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವುದಾಗಿ ಆರೋಪಿಸಲಾಗಿದೆ.
ನಿನ್ನೆಯಷ್ಟೇ ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮನೆ ಮೇಲೆ ದಾಳಿ ನಡೆಸಿ, 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು.