ಕಾಂಗ್ರೆಸ್ ಶಾಸಕನ ಜಮೀರ್ ಖಾನ್ ನ ಅತಿಯಾದ ಸ್ವಾಮಿ ನಿಷ್ಠೆಗೆ ಕಡಿವ ಹಾಕಲು ಮಾಜಿ ಸಚಿವ ಚಲುವರಾಯಸ್ವಾಮಿ ಮಧ್ಯಪ್ರವೇಶ ಮಾಡಿದ್ದಾರೆ
ಸಂಸದ ಡಿ.ಕೆ ಸುರೇಶ್ ಮನೆಗೆ ಭೇಟಿ ನೀಡಿದ ಚಲುವರಾಯಸ್ವಾಮಿ ಜಮೀರ್ ವಿರುದ್ಧ ಹರಿಹಾಯ್ದಿದ್ದಾರೆ. ಒಕ್ಕಲಿಗರ ಬಗ್ಗೆ ಮಾತಾಡದಂತೆ ಚಲುವರಾಯಸ್ವಾಮಿ ತಾಕೀತು ಮಾಡಿದ್ದಾರೆ. ಒಂದೇ ನಾಣ್ಯಕ್ಕೆ ಎರಡು ಮುಖಗಳು(ಬ್ಯಾಂಕರ್ಸ್ ಡೈರಿ)
ಒಂದು ವೇಳೆ ಒಕ್ಕಲಿಗರ ಬಗ್ಗೆ ಹಗುರವಾಗಿ ಮಾತನಾಡಿದರೆ ಜಮೀರ್ ಈ ನಡೆಯಿಂದ ಜೆಡಿಎಸ್ಗೆ ಲಾಭವಾಗಬಹುದು. ಹೀಗಾಗಿ ಆರಂಭದಲ್ಲೇ ವಿವಾದವನ್ನು ತಣ್ಣಗಾಗಿಸಲು ಚಲುವರಾಯಸ್ವಾಮಿ ಮುಂದಾಗಿದ್ದಾರೆ.
ಜಮೀರ್ ಗೂ ಆಪ್ತರಾಗಿರುವ ಚಲುವರಾಯಸ್ವಾಮಿ ಖಾನ್ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ವಿವಾದಕ್ಕೆ ಅಂತ್ಯ ಹಾಡಲು ಸಿದ್ದರಾಮಯ್ಯ ಸಹ ಸೂಚಿಸಿದ್ದಾರೆ ಎನ್ನಲಾಗಿದೆ.
ಜಮೀರ್, ಸಿದ್ದರಾಮಯ್ಯ ಆಪ್ತರಾದ ಚಲುವರಾಯಸ್ವಾಮಿ ಖುದ್ದು ಫೀಲ್ಡ್ಗಿಳಿದಿದ್ದಾರೆ. ಕಟುನುಡಿಗಳ ಮೂಲಕ ಆಪ್ತನಿಗೆ ಸುಮ್ಮನಿರುವಂತೆ ಪರೋಕ್ಷವಾಗಿ ಸೂಚಿಸಿದ್ದಾರೆ. ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತ – ಇಬ್ಬರು ಪೋಲಿಸರು ಸೇರಿ 8 ಮಂದಿ ಸಾವು
ಜಮೀರ್ ಗೆ ಶೋಕಾಸ್ ನೋಟಿಸ್ ?
ಜಮೀರ್ ಗೆ ಶೋಕಾಸ್ ನೋಟಿಸ್ ನೀಡಿ ಶಿಸ್ತುಕ್ರಮ ಕೈಗೊಳ್ಳುವಂತೆ ಶಿಸ್ತುಪಾಲನ ಸಮಿತಿ ರೆಹಮಾನ್ ಖಾನ್ಗೆ ಖುದ್ದು ಡಿಕೆಶಿ ಸೂಚಿಸಿದ್ದಾರೆ. ಇದೆಲ್ಲದರ ಮಧ್ಯೆ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ತುಟಿ ಬಿಚ್ಚಿಲ್ಲ.
ಕಾಂಗ್ರೆಸ್ ನಲ್ಲಿ ನಡೆದಿರುವ ಈ ಕಿತ್ತಾಟವನ್ನು ಜೆಡಿಎಸ್ ಹೇಗೆ ಲಾಭ ಮಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಲೆಕ್ಕಾಚಾರ ಹಾಕಲಾಗುತ್ತಿದೆ ಎಂಬ ವರದಿಗಳೂ ಇವೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ