ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದ ಸಂಬಂಧ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಸುಪ್ರೀಂ ಕೋರ್ಟ್ ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ನಿರ್ದೇಶನ ನೀಡಿತ್ತು. ಆದರೆ ಇದುವರೆಗೂ ಸಿನಿಮಾ ನಿರ್ಮಾಪಕರು ಕೋರ್ಟ್ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲ. ಆ್ಯಡ್ ಬ್ಯೂರೋ ಕಂಪನಿಯಿಂದ ಕೋಚ್ಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ. ನವೆಂಬರ್ 2 ಕ್ಕೆ ಕೋರ್ಟ್ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಹೀಗಾಗಿ ನಟ ರಜನಿಕಾಂತ್ ಪತ್ನಿ ಲತಾರಿಗೆ ಸಂಕಷ್ಟ ಎದುರಾಗಿದೆ.
2014 ರಲ್ಲಿ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕೋಚಡಯ್ಯಾನ್ ಚಿತ್ರದ ಸಂಬಂಧ ಆ್ಯಡ್ ಬ್ಯುರೋ ಕಂಪನಿ 6.2 ಕೋಟಿ ರೂ ವಂಚನೆ ಆರೋಪ ಮಾಡಿ ಎಫ್ಐಆರ್ ದಾಖಲಿಸಿತ್ತು. 10 ಕೋಟಿ ರೂಗೆ ಪೋಸ್ಟ್ ಪ್ರೊಡಕ್ಷನ್ ಕೆಲಸ ವಹಿಸಲಾಗಿತ್ತು. ಆದರೆ, 6.2 ಕೋಟಿ ರೂ ಬಾಕಿ ಬರಬೇಕಿದೆ ಎಂದು ಆ್ಯಡ್ ಬ್ಯೂರೋ ದೂರಿದೆ. ಲತಾ ರಜಿನಿಕಾಂತ್ ಅವರ ವೈಯಕ್ತಿಕ ಗ್ಯಾರಂಟಿ ಮೇಲೆ ತಾವು ಈ ಕಾರ್ಯ ವಹಿಸಿಕೊಂಡಿದ್ದು ಎಂದೂ ಈ ಸಂಸ್ಥೆ ವಾದಿಸಿದೆ.
ಇದೇ ವೇಳೆ, ಲತಾ ರಜನಿಕಾಂತ್ ಅವರಿಗೆ ಟ್ರಯಲ್ಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಬೇಕೆಂದು ವಕೀಲ ಬಾಲನ್ ಅವರಿಂದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ