ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಸೋಮವಾರ 10. 15 ಕ್ಕೆ ಪ್ರಮಾಣವಚನ ಸ್ವೀಕರಿಸಿದರು .
ಚೀಫ್ ಜಸ್ಟೀಸ್ ಆಫ್ ಇಂಡಿಯಾ ಎನ್.ವಿ.ರಮಣ್ ಅವರು ದ್ರೌಪದಿ ಮುರ್ಮುಗೆ ಪ್ರಮಾಣವಚನ ಭೋದಿಸಿದರು.
ದೇಶದ ಸಂಸತ್ ಭವನ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೇಶದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಮುರ್ಮು ಪಾತ್ರರಾಗಿದ್ದಾರೆ. ಇದನ್ನು ಓದಿ – ಅಕ್ಷರ್ ಆರ್ಭಟಕ್ಕೆ ಬೆದರಿದ ಕೆರಿಬಿಯನ್ನರು-ಸರಣಿ ಗೆದ್ದು ಟೀಂ ಇಂಡಿಯಾ ವಿಶ್ವದಾಖಲೆ
ಒಡಿಶಾದ ಆದಿವಾಸಿ ಸಮುದಾಯದ ಮಹಿಳೆ ರಾಷ್ಟ್ರದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಇಂದು ಅಲಂಕರಿಸಿದ್ದಾರೆ. ಈ ಮೂಲಕ ಭಾರತದ ರಾಜತಾಂತ್ರಿಕ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಯಾಗಿದೆ.
ಈ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಂತ್ರಿ ಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಭಾರತೀಯ ಸೇನೆಯ ಮುಖ್ಯಸ್ಥರು ಪಾಲ್ಗೊಂಡಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ