January 28, 2026

Newsnap Kannada

The World at your finger tips!

falls

ಭೀಕರ ಅಪಘಾತ : ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ದುರಂತ

Spread the love

ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಬಳೆಗಾರು ಬಳಿ ಸಂಭವಿಸಿದೆ. ಇದನ್ನು ಓದಿ – ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ಘೋರ ದುರಂತ

ಮೃತಪಟ್ಟವರು ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವರು. ಜೋಗ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಎದುರಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.

ಸಾಗರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ನಂತರ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

error: Content is protected !!