ಸ್ಯಾಂಡಲ್ ವುಡ್ ನಟಿ ಶಾನ್ವಿ ಶ್ರೀವಾಸ್ತವ ಇತ್ತೀಚಿಗೆ ಕಸ್ತೂರಿ ಮಹಲ್ ಸಿನಿಮಾ ಒಪ್ಪಿಕೊಂಡಿದ್ದರು. ನಟಿ ರಚಿತಾ ರಾಮ್ ಹೊರಬಂದ ಜಾಗಕ್ಕೆ ಶಾನ್ವಿ ಎಂಟ್ರಿ ಕೊಟ್ಟಿದ್ದರು. ವಿಶೇಷ ಎಂದರೆ ಈಗಾಗಲೇ ಸಿನಿಮಾದ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ. ಅಂದ್ಹಾಗೆ ನಿರ್ದೇಶಕ ದಿನೇಶ್ ಬಾಬು ಅವರ 50ನೇ ಸಿನಿಮಾವಿದು. ಅಕ್ಟೋಬರ್ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭಮಾಡಿದ್ದ ಚಿತ್ರತಂಡ ಈಗಾಗಲೇ ಚಿತ್ರೀಕರಣ ಮುಗಿಸಿ ಅಚ್ಚರಿ ಮೂಡಿಸಿದೆ.
ಕಡಿಮೆ ಸಮಯದಲ್ಲಿ ಚಿತ್ರೀಕರಣ ಮುಗಿಸುವುದರಲ್ಲಿ ನಿರ್ದೇಶಕ ದಿನೇಶ್ ಬಾಬು ಎತ್ತಿದ ಕೈ. ಸಾಕಷ್ಟು ಸಿನಿಮಾಗಳನ್ನು ಕಡಿಮೆ ಅವಧಿಯಲ್ಲಿ ಶೂಟಿಂಗ್ ಮುಗಿಸಿ ದಾಖಲೆ ಮಾಡಿದ್ದಾರೆ. ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಕಡಿಮೆ ಅವಧಿಯಲ್ಲಿ ಶೂಟಿಂಗ್ ಮಾಡಿ ಮುಗಿಸಿದ್ದಾರೆ.
ಈ ತಿಂಗಳ ಪ್ರಾರಂಭದಲ್ಲಿ ಚಿತ್ರತಂಡ ಚಿಕ್ಕಮಗಳೂರಿನ ಕೊಟ್ಟಿಗೆ ಹಾರ, ಬಾಲೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಆರಂಭವಾಗಿತ್ತು. ಆಯುಧ ಪೂಜೆಯ ಶುಭದಿನದಂದು ಅದೇ ಸ್ಥಳದಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆದಿದೆ. ಸುಮಾರು 20 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯಗೊಂಡಿದೆ.
ಈ ಸಿನಿಮಾದಲ್ಲಿ ನಾಯಕನಾಗಿ ಸ್ಕಂಧ ಅಶೋಕ್ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ಶ್ರುತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಸೇರಿದಂತೆ ಅನೇಕರಿದ್ದಾರೆ. ಸೈಕಲಾಜಿಕಲ್ ಥ್ರಿಲ್ಲಲ್ ಮಾದರಿಯ ಕಸ್ತೂರಿ ಮಹಲ್ ಹೇಗಿರಲಿದೆ ಎನ್ನುವುದು ಸಿನಿಪ್ರೇಕ್ಷಕರ ಕುತೂಹಲ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ