ಕಿವುಡ ಮತ್ತು ಮೂಗ ಮಗಳನ್ನು ಅಪಾರ್ಟ್ಮೆಂಟ್ನ ತಮ್ಮ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಎಸೆದು ಕೊಂದ ಆರೋಪದ ಮೇಲೆ ಬೆಂಗಳೂರು ಪೊಲೀಸರು ದಂತ ವೈದ್ಯೆನ್ನು ಬಂಧಿಸಿದ್ದಾರೆ.
ಉತ್ತರ ಬೆಂಗಳೂರಿನ ಎಸ್ಆರ್ನಗರದ ಅಪಾರ್ಟ್ಮೆಂಟ್ನಲ್ಲಿ ಈ ಭಯಾನಕ ಘಟನೆ ನಡೆದಿದೆ.ಇದನ್ನು ಓದಿ –ಮಂಡ್ಯದಲ್ಲಿ ಭೀಕರ ಹತ್ಯೆಯ ಆರೋಪಿ ಬಂಧನ :ಪತ್ನಿ ಸಂಬಂಧಿ ಜೊತೆ ಲವ್ವಿ-ಡವ್ವಿ, ವೇಶ್ಯೆ ಪ್ರೀತಿಗೆ ಬಿದ್ದು ಆದ ಸೈಕೋ ಕಿಲ್ಲರ್
ಆಕೆಯ ಪತಿ ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಸುಷ್ಮಾ ಭಾರದ್ವಾಜ್ ಅವರನ್ನು ಬಂಧಿಸಲಾಗಿದೆ.
ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಆರೋಪಿಯು ತನ್ನ ಮಗಳೊಂದಿಗೆ ಬಾಲ್ಕನಿಗೆ ಬಂದು ನಂತರ ಅವಳನ್ನು ಕೆಳಗೆ ಎಸೆದಿರುವುದನ್ನು ತೋರಿಸಿದೆ.
ನಂತರ ಸುಷ್ಮಾ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನದಲ್ಲಿ ರೇಲಿಂಗ್ ಮೇಲೆ ಏರುತ್ತಾಳೆ. ಆದರೆ ನೆರೆಹೊರೆಯವರು ರಕ್ಷಿಸಿದ್ದಾರೆ.
ಸುಷ್ಮಾ ತನ್ನ ವೃತ್ತಿ ಬೆಳವಣಿಗೆಗೆ ನಾಲ್ಕು ವರ್ಷದ ಮಗು ಅಡ್ಡಿಯಾಗಿದ್ದಾಳೆ ಎಂದು ಭಾವಿಸಿದ್ದಳು. ಇದಕ್ಕೂ ಮುನ್ನ ಮಗಳನ್ನು ರೈಲ್ವೆ ನಿಲ್ದಾಣದಲ್ಲಿ ಬಿಟ್ಟು ಹೋಗಲು ಯತ್ನಿಸಿದ್ದಳು. ಈ ವಿಷಯ ತಿಳಿದ ಕಿರಣ್ ತಕ್ಷಣ ಠಾಣೆಗೆ ಧಾವಿಸಿ ನೋಡಿದಾಗ ಅವರ ಮಗಳು ಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ