ಆನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚನ್ನಪಟ್ಟಣ ತಾಲ್ಲೂಕಿನ ಚೆನ್ನಿಗನ ಹೊಸಹಳ್ಳಿಯಲ್ಲಿ ಮಂಗಳವಾರ ಜರುಗಿದೆ.
ಚೆನ್ನಮ್ಮ ( 56) ಮೃತ ಮಹಿಳೆ. ಬೆಳಿಗ್ಗೆ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿತು. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದನ್ನು ಓದಿ –ಮೈಸೂರಿನಲ್ಲಿ ದುರಂತ : 16 ವರ್ಷದ ಮಗನ ಮುಂದೆಯೇ ತಂದೆಯ ಹತ್ಯೆ
ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ, ಶವ ಎತ್ತಲು ಅವಕಾಶ ನೀಡಿಲ್ಲ.