ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರೆ ನುಪೂರ್ ಶರ್ಮಾ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್ಐಆರ್ಗಳ ವಿಚಾರಣೆಯು ದೆಹಲಿಯಲ್ಲಿ ನಡೆಸುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.
ಪ್ರವಾದಿ ಮೊಹಮ್ಮದ್ ಕುರಿತ ಹೇಳಿಕೆಗೆ ಸಂಬಂಧಿಸಿ ದೇಶದ ವಿವಿಧ ಭಾಗಗಳಲ್ಲಿ ನುಪೂರ್ ಶರ್ಮಾ ವಿರುದ್ಧ ಪ್ರಕರಣಗಳು ದಾಖಲಾಗಿವೆ.ಇದನ್ನು ಓದಿ –ಜಿಮ್ನಲ್ಲಿದ್ದಾಗ ಜನಪ್ರಿಯ ಹಾಸ್ಯ ನಟನಿಗೆ ಹೃದಯಾಘಾತ ತುರ್ತು ಚಿಕಿತ್ಸೆ
ಈ ಎಲ್ಲಾ ಪ್ರಕರಣಗಳ ವಿಚಾರಣೆಯನ್ನ ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಜೊತೆಗೆ ಎಫ್ಐಆರ್ ದಾಖಲಾದ ಯಾವುದೇ ರಾಜ್ಯದ ಪೊಲೀಸರು, ತನಿಖೆಯ ಸಮಯದಲ್ಲಿ ಸಲಹೆಗಳನ್ನು ನೀಡಲು ಬಯಸಿದರೆ ಖಂಡಿತವಾಗಿಯೂ ನೀಡಬಹುದು ಎಂದು ಕೋರ್ಟ್ ಹೇಳಿದೆ.
ನುಪೂರ್ ಶರ್ಮಾಗೆ ರಿಲೀಫ್
ಜುಲೈ 19 ರಂದು ನಡೆದ ವಿಚಾರಣೆ ವೇಳೆ ಆಗಸ್ಟ್ 10 ವರೆಗೆ ನುಪೂರ್ ಶರ್ಮಾರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ಹೇಳಿತ್ತು. ಅಲ್ಲದೇ ನೂಪುರ್ ಶರ್ಮಾ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿತ್ತು. ‘
ಅವರ ಜೀವಕ್ಕೆ ಅಪಾಯವಿದೆ’ ಎಂದು ವಿಚಾರಣೆ ವೇಳೆ ನೂಪುರ್ ಶರ್ಮಾ ಪರ ವಕೀಲರು ವಾದ ಮಂಡಿಸಿದ್ದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ