ಸ್ಟಾರ್ ಕ್ಯಾಂಪೇನ್ನ ಮೂಲಕ ಯಾವುದೇ ಮತದಾರರನ್ನು ಸೆಳೆಯಲು ಸಾಧ್ಯವಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಶಿರಾದಲ್ಲಿ ಹೇಳಿದರು.
ಶಿರಾದ ಉಪಚುಣಾವಣೆಯ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಸುದ್ದಿ ಗಾರರೊಂದಿಗೆ ಮಾತನಾಡಿ ‘ಮಂಡ್ಯದ ಲೋಕಸಭಾ ಚುಣಾವಣೆಯಲ್ಲಿ ರೈತ ಸಂಘ, ಬಿಜೆಪಿ, ಮಾಧ್ಯಮಗಳು ಅನುಕಂಪಪೂರಿತ ಒಲವು, ಕರುಣೆ ತೋರಿದುದರಿಂದ ಸುಮಲತಾ ಚುಣಾವಣೆಯಲ್ಲಿ ಗೆದ್ದರು. ಈಗ ಚಿತ್ರತಾರೆಗಳನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿಸುತ್ತಿದ್ದಾರೆ. ಸ್ಟಾರ್ ಕ್ಯಾಂಪೇನ್ ನಿಂದ ಯಾವುದೇ ರೀತಿಯಲ್ಲೂ ಮತದಾರರನ್ನು ಸೆಳೆಯಲು ಸಾಧ್ಯವಿಲ್ಲ’ ಎಂದು ಬಿಜೆಪಿ ಪರ ಪ್ರಚಾರ ಮಾಡಲು ಒಪ್ಪಿರುವ ದರ್ಶನ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಗೃಹ ಸಚಿವ ಆರ್. ಅಶೋಕ್ ಸೇರಿದಂತೆ ಶಿರಾಗೆ ಭೇಟಿ ನೀಡಿ ಟಾಟಾ ಮಾಡಿ ಹೋಗಿದ್ದಾರೆ. ಆದರೆ ಇಲ್ಲಿನ ಸಮಸ್ಯೆಗಳ ಬಗ್ಗೆ ಯಾರು ಕೂಲಂಕುಶವಾಗಿ ಪರಶೀಲನೆ ನಡೆಸಿದ್ದಾರೆ? ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಯಾರು ಮಾಡಿದ್ದಾರೆ? ಎಂದು ಪ್ರಶ್ನೆಗಳ ಮಳೆಗರೆದರು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ