ಸೆಪ್ಟೆಂಬರ್ 12 ರಿಂದ ಹತ್ತು ದಿನ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಧುಸ್ವಾಮಿ ಅವರು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು
ಬೀದರ್, ಹಾಸನ, ಚಾಮರಾಜನಗರ, ಕೊಡಗು, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿ ಮಾಡಲು ತೀರ್ಮಾನ ಮಾಡಲಾಗಿದೆ.
ವೈಟ್ಫೀಲ್ಡ್ ರೈಲ್ವೇ ನಿಲ್ದಾಣದ ಮೇಲ್ಸೇತುವೆಗೆ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿ 10 ಖಾಲಿ ಸ್ಥಾನ ಇತ್ತು, ಅದರಲ್ಲಿ 7 ಸ್ಥಾನಗಳನ್ನು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಲೋಕಾಯುಕ್ತ ವಕೀಲರು ಸೇರಿದಂತೆ ಇನ್ನಿತರ ಹುದ್ದೆ ನೇಮಕ ಆಗಲಿದೆ ಎಂದು ಸಂಪುಟ ಸಭೆಯ ನಿರ್ಣಯಗಳನ್ನು ವಿವರಿಸಿದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ