ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ (64) ಕಳೆದ ರಾತ್ರಿ ವಿಧಿವಶರಾದರು.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿವೈಫಲ್ಯದ ಸಮಸ್ಯೆಯಿಂದ ದಾಖಲಾಗಿದ್ದ ರಾಮೇಗೌಡ ಚಿಕಿತ್ಸೆಗಾಗಿ
ಕಳೆದ ಕೆಲವು ದಿನಗಳಿಂದಲೂ ಕಿಡ್ನಿವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಗುರುವಾರವಷ್ಟೇ ಮೈಸೂರಿಗೆ ತೆರಳಿದ್ದ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ತಮ್ಮ ಸಹೋದರನ ಆರೋಗ್ಯ ವಿಚಾರಿಸಿದ್ದರು.
ಶುಕ್ರವಾರ ರಾಮೇಗೌಡರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಸಂಜೆ ಆರೋಗ್ಯ ಸಮಸ್ಯೆ ಉಲ್ಬಣಿಸುತ್ತಿದ್ದಂತೆ ಹೆಚ್ಚಿನ ನಿಗಾ ವಹಿಸಲಾಗಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ರಾಮೇಗೌಡರು ವಿಧಿವಶರಾಗಿದ್ದಾರೆ.
ಮೈಸೂರು ಜಿಲ್ಲೆಯ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶನಿವಾರ ರಾಮೇಗೌಡರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ತದನಂತರ ಸ್ವಗ್ರಾಮದಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುವುದು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್