ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಹಿನ್ನೆಲೆಯಲ್ಲಿ ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮುರುಘಾ ಶ್ರೀಗಳ ಪರ ವಕೀಲರು ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.ಇದನ್ನು ಓದಿ –ಸೆ 28 ರಿಂದ ಅ. 2 ರವರೆಗೆ ಶ್ರೀರಂಗಪಟ್ಟಣದ ದಸರಾ ಮಹೋತ್ಸವ – ಸಚಿವ ಕೆ.ಗೋಪಾಲಯ್ಯ
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.
ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುರುಘಾ ಶ್ರೀಗಳು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.
- ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ
- BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು
- ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ
- ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ