2ನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿಯೊಬ್ಬರಿಗೆ ಹಂದಿಜ್ವರಕ್ಕೆ ಬಲಿಯಾಗಿದ್ದಾರೆ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ.
ಹುಣಸೂರು ತಾಲ್ಲೂಕಿನ ಕೋಣನ ಹೊಸಳ್ಳಿ ಗ್ರಾಮದ ಸ್ವಾಮಿ ನಾಯ್ಕ ಎಂಬುವವರ ಪುತ್ರಿ ಛಾಯಾ H1N1 ನಿಂದ ಮೃತಪಟ್ಟಿದ್ದಾರೆ. ಇದನ್ನು ಓದಿ – ರೇಪ್ ಕೇಸ್ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್, ಪತ್ನಿಗೆ ಜಾಮೀನು
ಛಾಯಾ ಅವರಿಗೆ ಈಗಾಗಲೇ 4 ವರ್ಷದ ಗಂಡು ಮಗುವಿದೆ 2ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಹಂದಿಜ್ವರಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಛಾಯಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಛಾಯಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.