ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಶಾಸಕ ಅರವಿಂದ ಲಿಂಬಾವಳಿ ಅವಾಜ್ ಹಾಕಿ, ದರ್ಪ ತೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಾಸಕರು ಗುರುವಾರ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಲು ತೆರಳಿದ ಮೇಲೆ ಘಟನೆ ನಡೆದಿದೆ. ಅಧಿಕಾರಿಗಳ ಜೊತೆ ಮಳೆ ಹಾನಿ ಪ್ರದೇಶ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ್ ಲಿಂಬಾವಳಿಯಿಂದ ಅಮಾಯಕ ಮಹಿಳೆ ಮೇಲೆ ದರ್ಪ ಮೇರೆದಿದ್ದಾರೆ.
ಮಳೆಯಿಂದ ವರ್ತೂರು ಕೆರೆ ಕೋಡಿ ಬಿದ್ದ ಪರಿಣಾಮ ನೀರು ವಸತಿ ಪ್ರದೇಶಗಳಿಗೆ ನೀರು ನುಗ್ಗಿತ್ತು. ಈ ವೇಳೆ ಹಾನಿಗೊಳಗಾದ ಪ್ರದೇಶ ವೀಕ್ಷಣೆಗೆ ಶಾಸಕ ಲಿಂಬಾವಳಿ ತೆರಳಿದ್ದರು. ಈ ವೇಳೆ ಶಾಸಕರಿಗೆ ಮನವಿ ಸಲ್ಲಿಸಲು ಮಹಿಳೆ ಮನವಿ ಪತ್ರ ಇಟ್ಟುಕೊಂಡು ಬಂದಿದ್ದರು.
ಮುರುಘಾ ಮಠದ ವಸತಿ ಶಾಲಾ ವಿದ್ಯಾರ್ಥಿನಿಯರು ಬೇರೆಡೆಗೆ ಸ್ಥಳಾಂತರಕ್ಕೆ ಚಿಂತನೆ
ಮಹಿಳೆ ನೋಡುತ್ತಿದಂತೆ ಗರಂ ಆದ ಶಾಸಕರು, ಮಹಿಳೆಯ ಬಳಿ ಮನವಿ ಪತ್ರ ಕಸಿದುಕೊಂಡು ಆವಾಜ್ ಹಾಕಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯನ್ನು ನೋಡಿದ ಕೂಡಲೇ ಗರಂ ಆದ ಶಾಸಕರು, ನಿಂಗೆ ಮಾನ ಮರ್ಯಾದೆ ಇದೀಯಾ? ನಾಚಿಕೆ ಅಗಲ್ವಾ ನಿಂಗೆ? ನಿಂಗೆ ಮರ್ಯಾದೆ ಬೇರೆ ಕೊಡಬೇಕಾ? ಏಯ್ ಆಕೆಯನ್ನು ಸ್ಟೇಷನ್ ಗೆ ಕರೆದುಕೊಂಡು ಹೋಗಿ ಕೂರಿಸಿ.. ಏಯ್ ಎತ್ತಿಕೊಂಡು ಹೋಗೋ ಅವಳನ್ನು, ಹೇ ಬಾಯಿ ಮುಚ್ಚು, ಹೇ ಬಾಯಿ ಮುಚ್ಚು.. ಒದ್ದು ಒಳಗೆ ಹಾಕ್ತಿನಿ ಅಂತಾ ಏಕವಚನದಲ್ಲಿ ನಿಂದಿಸಿದ್ದಾರೆ.
ಈ ವೇಳೆ ಮಹಿಳೆ ತಾನು ನ್ಯಾಯ ಕೇಳಲು ಬಂದಿದ್ದೇನೆ, ಮಹಿಳೆ ಇದ್ದೀನಿ. ಗೌರವ ಕೊಟ್ಟು ಮಾತನಾಡಿಸಿ ಎಂದು ಮನವಿ ಮಾಡಿಕೊಂಡರೂ ಕೇಳದೆ ವಶಕ್ಕೆ ಪಡೆದುಕೊಳ್ಳಲು ಶಾಸಕರು ಸೂಚನೆ ನೀಡಿರುವ ವಿಡಿಯೋದಲ್ಲಿಇದೆ.
ಶಾಸಕರು ಸೂಚನೆ ನೀಡುತ್ತಿದ್ದಂತೆ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಗಂಟೆಗಟ್ಟಲೇ ಠಾಣೆಯಲ್ಲೇ ಕೂರಿಸಿ ಕಿರುಕುಳ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ