February 22, 2026

Newsnap Kannada

The World at your finger tips!

car tree

ಡಿಸಿಪಿ ಕಾರಿನ ಮೇಲೆ ಬಿತ್ತು ಬೃಹತ್‌ ಕೊಂಬೆ: ಸಾಹೇಬ್ರು, ಚಾಲಕ ಪ್ರಾಣಾಪಾಯದಿಂದ ಪಾರು

Spread the love

ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಡಿಸಿಪಿ ಕಾರಿನ ಮೇಲೆ ಬಿದ್ದು ಜಖಂಗೊಂಡ ಘಟನೆ ಬೆಂಗಳೂರಿನ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ಭಾನುವಾರ ಜರುಗಿದೆ.

ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣ ಕಾಂತ್ ಅವರು ಇನ್ನೋವಾ ಕಾರಿನಿಂದ ಇಳಿದು ಕಚೇರಿಗೆ ತೆರಳಿದ 5 ನಿಮಿಷದ ಬಳಿಕ ಕೊಂಬೆ ಬಿದ್ದಿದೆ.

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ಮುರುಘಾ ಸ್ವಾಮಿ ವಜಾ

ಡಿಸಿಪಿಯವರು ಇಳಿದ ಬಳಿಕ ಚಾಲಕ ಕಾರಿನಲ್ಲೇ ಕುಳಿತಿದ್ದರು. ಈ ವೇಳೆ ಮೊಬೈಲಿಗೆ ಕರೆ ಬಂದಿದೆ. ಕರೆ ಬಂದ ಹಿನ್ನೆಲೆಯಲ್ಲಿ ಕಾರಿನಿಂದ ಇಳಿದು ಹೊರ ಬಂದು ಮಾತನಾಡುತ್ತಿದ್ದಾಗ ಘಟನೆ ನಡೆದಿದೆ.

ಕೊಂಬೆ ಚಾಲಕ ಕುಳಿತಿದ್ದ ಸ್ಥಳದ ಮೇಲೆ ಬಿದ್ದಿದೆ. ಒಂದು ವೇಳೆ ಚಾಲಕ ಕಾರಿನಲ್ಲಿ ಇದ್ದಿದ್ದರೆ ಗಂಭೀರವಾದ ಗಾಯಗಳಾಗುವ ಸಾಧ್ಯತೆ ಇತ್ತು. ಸ್ವಲ್ಪದರಲ್ಲೇ ಡಿಸಿಪಿ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

error: Content is protected !!