ಮಂಡ್ಯ ಜಿಲ್ಲೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಬೆಂಗಳೂರು – ಮೈಸೂರು ಹೆದ್ದಾರಿಯ ಪರಿಣಾಮ, ಮಳೆ ನೀರಿನ ಹರಿವು ಸರಿಯಾಗಿ ಆಗದೆ ಹಲವು ಕಡೆ ಗದ್ದೆಗಳು, ಹಳ್ಳಿ ರಸ್ತೆಗಳು, ಮನೆಗಳು ಜಲಾವೃತಗೊಂಡು ಜನ-ಜೀವನಕ್ಕೆ ಅಪಾರ ಹಾನಿಯನ್ನುಂಟು ಮಾಡಿದೆ.
ಈ ಕುರಿತು ಮಂಡ್ಯ ಸಂಸದೆ ಸುಮಲತಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರುಗಳಿಗೆ ಸುದೀರ್ಘ ಪತ್ರ ಬರೆದು, ಹೆದ್ದಾರಿಯಲ್ಲಿ ಕಳಪೆ ಕಾಮಗಾರಿಯಿಂದ ಕೆಲವು ಸ್ಥಳಗಳಲ್ಲಿ ವಾಹನ ದಟ್ಟಣೆ ಜೊತೆಗೆ ಅಪಘಾತಗಳು ಸಂಭವಿಸಿರುವ ಬಗ್ಗೆ ಗಮನ ಸೆಳೆದಿರುವ ಸಂಸದೆ ಸುಮಲತಾ
ಜನರ ಜೀವನಕ್ಕೆ ತೊಂದರೆಯಾಗಿರುವ ಬಗ್ಗೆ ಪತ್ರಿಕಾ ವರದಿಗಳನ್ನು ಅವರ ಗಮನಕ್ಕೆ ತಂದಿದ್ದಾರೆ
ಈ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನೀರಿನ ಹರಿವಿಗೆ ಕಾಲುವೆ-ಚರಂಡಿಗಳನ್ನು ನಿರ್ಮಿಸಿದ್ದರೂ, ಅವರ ಉದ್ದೇಶಕ್ಕೂ ಈಗ ಎದುರಾಗಿರುವ ಪರಿಸ್ಥಿತಿಗೂ ತಾಳೆಯಾಗುತ್ತಿಲ್ಲ. ನೀರಿನ ಹರಿವು ಸರಿಯಾಗಿ ಆಗದೆ, ಹೆದ್ದಾರಿ ಪಕ್ಕದ ಹೊಲ ಗದ್ದೆಗಳಲ್ಲಿ ನೀರು ನಿಂತಿದೆ. ಸಂಚಾರಕ್ಕೆ ಮಾತ್ರವಲ್ಲದೆ, ಜನರ ಆರೋಗ್ಯಕ್ಕೂ ತೊಂದರೆಯಾಗುವ ಪರಿಸ್ಥಿತಿ ಬಂದಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ : ಸಚಿವ ಗೋಪಾಲಯ್ಯ

ಹಳ್ಳಿಯ ಜನರು ಮತ್ತು ಜಾನುವಾರುಗಳ ಸಂಚಾರಕ್ಕೂ ಹೆದ್ದಾರಿಯ ಸರ್ವಿಸ್ ರಸ್ತೆಗಳು, ಪಾದಚಾರಿ ಮಾರ್ಗಗಳು ಸಮರ್ಪಕವಾಗಿಲ್ಲ. ಹೆದ್ದಾರಿ ಅಧಿಕಾರಿಗಳು ಈ ಕೂಡಲೇ, ಪರಿಸ್ಥಿತಿಯ ಗಂಭೀರತೆ ಅರಿತು, ನೀರಿನ ಹರಿವಿಗೆ ಸಮರ್ಪಕ ಚರಂಡಿ ವ್ಯವಸ್ಥೆ, ಸರ್ವಿಸ್ ರಸ್ತೆ ಮತ್ತು ಪಾದಚಾರಿ ಮಾರ್ಗಗಳನ್ನು ಸರಿಯಾದ ರೀತಿಯಲ್ಲಿ ವಿನ್ಯಾಸ ಮಾಡಲು ಸೂಚಿಸುವಂತೆ ಸುಮಲತಾ ಮನವಿ ಮಾಡಿದ್ದಾರೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೂಡಲೇ ಕ್ರಮ ತೆಗೆದುಕೊಂಡು, ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗೆ ಧಾವಿಸುತ್ತೀರೆಂದು ಭರವಸೆ ಇದೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು