ಭಾರೀ ಮಳೆಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದೆ
ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ ಮೆಟ್ಟಿಲು ಮಾರ್ಗದ ಕಡೆ ವೀರಭದ್ರ ಸ್ವಾಮಿ ದೇಗುಲದ ಭಾಗದಲ್ಲಿ ಭೂ ಕುಸಿತ ಆಗಿದೆ. ಸುಲ್ತಾನಪೇಟೆ ಗ್ರಾಮದ ಕಡೆ ಮತ್ತದು ಭಾಗದಲ್ಲಿ ಭೂ ಕುಸಿತ ಆಗಿದೆ. ಬೃಹತ್ ಗಾತ್ರದ ಕಲ್ಲು ಬಂಡೆಗಳು ಮರಗಳು ಮಣ್ಣು ಸಮೇತ ಕೊಚ್ಚಿಕೊಂಡು ಬಂದಿವೆ.
ಈ ಗುಡ್ಡ ಕುಸಿತ ಉಂಟಾದ ಭಾಗದಿಂದ ಝರಿಯಂತೆ ನೀರು ಹರಿದುಬರುತ್ತಿದೆ. 2 ಕಡೆಗಳಲ್ಲಿ ಗುಡ್ಡ ಕುಸಿತವಾಗಿರುವುದರಿಂದ ಸುಲ್ತಾನಪೇಟೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ ಕಲ್ಲು ಬಂಡೆಗಳು ಉರುಳಿ ಗ್ರಾಮಕ್ಕೆ ಬರುವ ಭೀತಿಯಲ್ಲಿದ್ದಾರೆ. ಇದನ್ನು ಓದಿ – BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣ – ರಾಜ್ಯದ 35 ಕಡೆ NIA ದಾಳಿ
2021ರ ಆಗಸ್ಟ್ 25ರಂದು ಸಹ ಇದೇ ರೀತಿ ಗುಡ್ಡ ಕುಸಿತ ಆಗಿತ್ತು. ಆ ಸಮಯದಲ್ಲಿ ರಸ್ತೆ ಮಾರ್ಗದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಆಗಿತ್ತು. ಇದರಿಂದ ಕೆಲವು ತಿಂಗಳವರೆಗೂ ನಂದಿ ಬೆಟ್ಟಕ್ಕೆ ಹೋಗಲು ಪ್ರವಾಸಿಗರಿಗೆ ಅವಕಾಶವನ್ನು ನಿಷೇಧಿಸಲಾಗಿತ್ತು.
ಇದೀಗ ಮತ್ತೆ ಭಾರೀ ಮಳೆಗೆ ಈ ವರ್ಷವೂ ಎರಡು ಕಡೆ ಗುಡ್ಡ ಕುಸಿತವಾಗಿದೆ. ಆದರೆ ರಸ್ತೆ ಮಾರ್ಗದಲ್ಲಿ ಯಾವುದೇ ಭೂ ಕುಸಿತ ಆಗಿಲ್ಲ. ಹೀಗಾಗಿ ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ಸುಲ್ತಾನಪೇಟೆ ಗ್ರಾಮದ ಕಡೆ ಭೂ ಕುಸಿತ ಆಗಿದೆ ಬೆಟ್ಟದಿಂದ ಹರಿದುಬರುತ್ತಿರುವ ನೀರು ಬೆಟ್ಟದ ಕೆಳಭಾಗದ ಜಮೀನುಗಳಿಗೆ ನುಗ್ಗಿದೆ. ಗ್ರಾಮಸ್ಥರಿಗೂ ಸಹ ಬಂಡೆಗಳು ಉರುಳಿಬರುವ ಆತಂಕ ಕಾಡುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

ನಂದಿಬೆಟ್ಟ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ