February 21, 2026

Newsnap Kannada

The World at your finger tips!

audio

ವಿವಿಧ ಮಠಾಧೀಶರಿಂದಲೂ ಲೈಂಗಿಕ ದೌರ್ಜನ್ಯ: ಆಡಿಯೋದಲ್ಲಿ ಮಾತನಾಡಿದ ಇಬ್ಬರು ಮಹಿಳೆಯರಿಗಾಗಿ ಶೋಧ

Spread the love

ರಾಜ್ಯದ ಕೆಲವು ಮಠಗಳ ಸ್ವಾಮಿಗಳು ಲಫಂಗರು ಎಂದು ಆಡಿಯೋದಲ್ಲಿ ಮಾತನಾಡಿಕೊಂಡ ಆ ಇಬ್ಬರು ಮಹಿಳೆಯರಿಗಾಗಿ ಪೋಲಿಸರು ಈಗ ಶೋಧನಾ ಕಾರ್ಯ ಅರಂಭಿಸಿದ್ದಾರೆ.

ಈ ಇಬ್ಬರು ಮಾತನಾಡಿರುವ ಆಡಿಯೋ ವೈರಲ್ ಆದ ನಂತರ ಬೆಳಗಾವಿಯ ನೇಗಿನಹಾಳ ಮಠದ ಲಿಂಗಾಯತ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರಿಗಾಗಿ ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಿ ಕಡ್ಡಾಯ

ವಿವಿಧ ಮಠಾಧೀಶರು ಲೈಂಗಿಕ ದೌರ್ಜನ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಫೋನ್ ನಲ್ಲಿ ಮಾತನಾಡಿದ್ದ ಸಂಭಾಷಣೆ ವೈರಲ್ ಆಗಿ ಈ ಸಾವಿಗೆ ಕಾರಣವಾಯಿತು ಎನ್ನಲಾಗಿದೆ.

ನೇಗಿನಹಾಳ್ ನಿವಾಸಿ ಸೋಮಪ್ಪ ಈರಪ್ಪ ಬಾಗೇವಾಡಿ ಎಂಬುವವರ ದೂರಿನ ಮೇರೆಗೆ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೈಲಹೊಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಯು.ಎಚ್.ಸಾತೇನಹಳ್ಳಿ ತಿಳಿಸಿದ್ದಾರೆ.

ಮಂಗಳವಾರ ನಡೆದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಹಲವಾರು ಗಣ್ಯರು ಮತ್ತು ರಾಜಕೀಯ ಮುಖಂಡರು ಭಾಗವಹಿಸಿದ್ದರು.

error: Content is protected !!