ತುಮಕೂರು ಜಿಲ್ಲೆಯ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿಯ ಶಿಕ್ಷಕಿ ಸೇರಿ ಇಬ್ಬರನ್ನು ಅಮಾನತು ಮಾಡಲಾಗಿದೆ.
ಇಬ್ಬರು ಶಿಕ್ಷಕಿಯರ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇಪದೇ ಜಗಳ ಮಾಡಿಕೊಳ್ಳುತ್ತಿದ್ದು, ಮಕ್ಕಳಿಗೆ ಸರಿಯಾಗಿ ಪಾಠ ಕೂಡ ಮಾಡುತ್ತಿರಲಿಲ್ಲ. ಇದನ್ನು ಗಮನಿಸಿದ ಗ್ರಾಮಸ್ಥರು ತಿಳಿಹೇಳಿದರೂ ಕೂಡ ಕೇಳಿರಲಿಲ್ಲ.
ಕೊನೆಗೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕಿ ಶಾಲೆಯಲ್ಲಿಯೇ ಮದ್ಯ ಸೇವಿಸುತ್ತಾರೆ ಎನ್ನುವುದು ಗೊತ್ತಾಗಿದೆ.
ಮೂನ್ ಮಿಷನ್ ಉಡಾವಣೆಗೆ ಸೆ.23ಕ್ಕೆ ಮೂಹೂರ್ತ ಫಿಕ್ಸ್
ಗ್ರಾಮಸ್ಥರು ನೀಡಿದ ದೂರು ಆಧರಿಸಿ ಪರಿಶೀಲನೆಗೆ ಬಂದ ಅಧಿಕಾರಿಗಳು ಶಿಕ್ಷಕಿಯರ ಟೇಬಲ್ ತೆರೆದು ನೋಡಿದಾಗ ಅದರಲ್ಲಿ ಮದ್ಯದ ಬಾಟಲ್ ಪತ್ತೆಯಾಗಿವೆ. ವಿಚಾರಣೆ ಕಾಯ್ದಿರಿಸಿ ಇಬ್ಬರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ