ಸುಧೀರ್ ಅಂಗೂರ್ ಮಾಲೀಕತ್ವದ ಬೆಂಗಳೂರಿನ ಪ್ರತಿಷ್ಠಿತ ಅಲಯನ್ಸ್ ಯುನಿವರ್ಸಿಟಿಯನ್ನು ರಾಜಕಾರಣಿಯೊಬ್ಬರಿಗೆ ಮಾರಾಟ ಮಾಡಲು ಡೀಲ್ ಕುದುರಿಸಿದ ಹಾಗೂ ವಿವಿಗೆ ಗೂಂಡಾಗಳನ್ನು ಕರೆದುಕೊಂಡು ಬಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಕುಲಪತಿ ಮಧುಕರ್ ಅಂಗೂರ್ ಮತ್ತು ಸ್ಯಾಂಡಲ್ವುಡ್ ನಟಿ ಶ್ರೀಲೀಲಾರ ತಾಯಿ ಸ್ವರ್ಣಲತಾ ವಿರುದ್ಧ ದೂರು ದಾಖಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್, ಅಲಯನ್ಸ್ ವಿವಿಯಲ್ಲಿ ಮಧುಕರ್ ಗಲಾಟೆ ಮಾಡಿದ್ದಾರೆ. ಬಲವಂತವಾಗಿ ವಿವಿಯ ಗೇಟ್ ತೆಗೆದು ಒಳನುಗ್ಗಿದ್ದಾರೆ.
5-6 ಜನರ ಜೊತೆ ಹೋಗಿ ಅಲಯನ್ಸ್ ವಿವಿ ನಮಗೆ ಸೇರಿದ್ದು ಎಂದು ಮಧುಕರ್ ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಿ ರಿಜಿಸ್ಟ್ರಾರ್ ನಿವೇದಿತಾ ಜೈನ್ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದರು. ಎಚ್ ಎಸ್ ಮುದ್ದೇಗೌಡರ ಪುತ್ರ- ಕಿರುತೆರೆ ಕಲಾವಿದ ಮಂಡ್ಯ ರವಿ ಪ್ರಸಾದ್ ಇನ್ನಿಲ್ಲ
ವಿಚಾರಣೆ ಬಳಿಕ
ಈ ದೂರಿನಲ್ಲಿ 40-50 ಜನ ಬೌನ್ಸರ್ ಇದ್ದರೆಂದು ತಿಳಿಸಿದ್ದಾರೆ. 4 ಶಸ್ತ್ರಾಸ್ತ್ರ ಇದ್ದವೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಧುಕರ್ ಅಂಗೂರ್ ಸೇರಿ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಕೂಲಂಕುಷವಾಗಿ ವಿಚಾರಣೆ ಬಳಿಕ ಸತ್ಯಾಂಶ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ