ಮೇಕೆದಾಟು ಪಾದಯಾತ್ರೆ ಬಳಿಕ ಕಾಂಗ್ರೆಸ್ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶನಿವಾರ ಮಾಹಿತಿ ನೀಡಿದರು.
ಮಂಡ್ಯದ ಸುಮಾ ರವಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಂದು ಪಾದಯಾತ್ರೆಯ ಗುಟ್ಟು ರಟ್ಟು ಮಾಡಿದ
ಭಾರತ್ ಜೋಡೋ ಯಾತ್ರೆ ಬಳಿಕ ಕೃಷ್ಣ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ `ಕೃಷ್ಣ ಯಾತ್ರೆ’
ಹಮ್ಮಿಕೊಳ್ಳಲಾಗುತ್ತದೆ. ಈ ಬಗ್ಗೆ ಸ್ಥಳೀಯ ನಾಯಕರಿಗೂ ಹೇಳಿದ್ದೇನೆ ಎಂದರು. ಕಾಲೇಜ್ ಗೆ ಬಂಕ್ ಹಾಕಿ ಗೆಳೆಯನ ಜೊತೆ ಜಾಲಿ ಟ್ರಿಪ್ : ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು- ಗೆಳೆಯ ಬಚಾವ್
ಈ ಕೃಷ್ಣ ಯಾತ್ರೆ ತಯಾರಿ ಆರಂಭವಾಗಿಲ್ಲ. ಭಾರತ್ ಜೋಡೋ ಯಾತ್ರೆ ಮುಗಿದ ನಂತರ ನಾನೇ ನೇತೃತ್ವ ತೆಗೆದುಕೊಳ್ಳುತ್ತೇನೆ. ಕೃಷ್ಣ ನೀರಾವರಿ ಯೋಜನೆಗಾಗಿ ಪಾದಯಾತ್ರೆ ಮಾಡ್ತೇವೆ. ಈಗ ಭಾರತ್ ಜೋಡೋ ಯಾತ್ರೆ ಮುಗಿದ ನಂತರ ಅದರ ಚಿತ್ರಣ ಆ ಮೇಲೆ ಹೇಳ್ತೀನಿ ಎಂದು ವಿವರಿಸಿದರು
ನಮ್ಮದು 22 ದಿನಗಳ ಭಾರತ್ ಜೋಡೋ ಯಾತ್ರೆ. ಯಾತ್ರೆಗೆ ಯಾವ ಕಾರ್ಯಕರ್ತನೂ ಹೂವಿನ ಹಾರ ತರಬೇಡಿ, ಯಾರಿಗೂ ಹೂವಿನ ಹಾರ ಹಾಕಬೇಡಿ. ಹೂವಿನ ಹಾರ ಹಾಕಿಸಿಕೊಳ್ಳಲು ಪೊಲೀಸ್ ಹಾಗೂ ಸೆಕ್ಯೂರಿಟಿ ಬಿಡಲ್ಲ. ನಿಮ್ಮ ಅಭಿಮಾನ ಪ್ರೀತಿ ಜನ ಸಂಘಟನೆಯಲ್ಲಿ ಇರಲಿ ಎಂದು ತಿಳಿಸಿದರು.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ