ಆರ್ಕಿಟೆಕ್ಟ್ ಓದುತ್ತಿದ್ದ ಯುವಕ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅಮೇರಿಕಾದಲ್ಲಿ ಅವಕಾಶ ದೊರೆಯಲಿಲ್ಲ ಎಂಬ ಕಾರಣಕ್ಕಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದೆ.
ಸಾಯಿಸನ್ವಿತ್ (23) ಮೃತ ದುರ್ದೈವಿ. ಮೃತ ಯುವಕನು ಮಾಗಡಿ ಪಟ್ಟಣದ ನಿವಾಸಿ. ವಿದ್ಯಾಭ್ಯಾಸಕ್ಕೆ ಯು.ಎಸ್ನಲ್ಲಿ ಅವಕಾಶ ಸಿಗಲಿಲ್ಲ ಎಂದು ಮನನೊಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯು.ಎಸ್ನಲ್ಲಿ ಕನ್ಸ್ಟ್ರಕ್ಷನ್ ಮ್ಯಾನೇಜ್ಮೆಂಟ್ನ ವಿದ್ಯಾಭ್ಯಾಸಕ್ಕಾಗಿ ಹೋಗಬೇಕಾಗಿತ್ತು.
ಪಾಸ್ ಪೋರ್ಟ್ನಲ್ಲಿ ಹೆಸರು ಸರಿಯಾಗಿ ನಮೂದಿಸಿಲ್ಲ ಎಂಬ ಕಾರಣಕ್ಕೆ ಮೇಲ್ ಬಂದಿಲ್ಲ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದನ್ನು ಓದಿ : ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅಧಿಕೃತ ಆಹ್ವಾನ
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಾಗಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ರವಾನಿಸಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ