ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾನ್ (ನಿವೃತ್ತ) ಅವರನ್ನು ಭಾರತೀಯ ಸೇನೆಗೆ ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ.
ಹುತಾತ್ಮ ಬಿಪಿನ್ ರಾವತ್ ಬಳಿಕ ಸಿಡಿಎಸ್ ಸ್ಥಾನವನ್ನು ಅಲಂಕರಿಸಲಿರುವ ಎರಡನೇ ದಂಡನಾಯಕ ಎಂಬ ಹೆಗ್ಗಳಿಕೆಗೆ ಅನಿಲ್ ಚೌಹಾಣ್ ಅವರಿಗಿದೆ. ಇದನ್ನು ಓದಿ – ನಟಿ ದೀಪಿಕಾ ಪಡುಕೋಣೆಗೆ ಅನಾರೋಗ್ಯ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ
ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ 2021ರಲ್ಲಿ ಪೂರ್ವ ಕಮಾಂಡ್ನ ಮುಖ್ಯಸ್ಥ ಸ್ಥಾನದಿಂದ ನಿವೃತ್ತರಾಗಿದ್ದರು. ಇವರೆ ಸೇನಾ ವ್ಯವಹಾರಗಳ ಸಚಿವಾಲಯಕ್ಕೆ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಕಳೆದ 2021ರ ಡಿಸೆಂಬರ್ 8ರಂದು ಬಿಪಿಎನ್ ರಾವತ್ ಹೆಲಿಕಾಪ್ಟರ್ ದುರಂತದಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದರು. ಅದಾದ ಬಳಿಕ ಈ ಹುದ್ದೆಗೆ ಕೇಂದ್ರ ಸರ್ಕಾರ ಯಾರನ್ನೂ ನೇಮಕ ಮಾಡಿರಲಿಲ್ಲ. ಈಗ ಅನಿಲ್ ಚೌಹಾಣ್ರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.