ನಾಳೆ ಇಡಿ ವಿಚಾರಣೆಗೆ ಹೋಗವುದಿಲ್ಲ ಎಂದು ಬೆಳಿಗ್ಗೆ ಹೇಳಿದ್ದ ಡಿಕೆ ಬ್ರದರ್ಸ್ ಈಗ ಉಲ್ಟಾ ಹೊಡೆದಿದ್ದಾರೆ.
ನ್ಯಾಷನಲ್ ಹೆರಾಲ್ಡ್ ( National Herald )ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗುವುದಾಗಿ ಕೆಪಿಸಿಸಿ ( KPCC ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಇದನ್ನು ಓದಿ –ಸೀರಿಯಲ್ ನಟಿ ದಿವ್ಯಾ ಶ್ರೀಧರ್ ಗೆ ವಂಚನೆ ಪಾಪಿ ಪತಿಯ ಬಗ್ಗೆ ದೂರಿನ ವಿಡಿಯೋ
ಇಂದೇ ದೆಹಲಿಗೆ ಡಿಕೆ ಸಹೋದರರಾದ ಡಿ.ಕೆ.ಶಿವಕುಮಾರ್ ( D K Shivkumar ) ಹಾಗೂ ಸಂಸದ ಡಿ.ಕೆ.ಸುರೇಶ್ ( D K Suresh ) ತೆರಳಲಿದ್ದಾರೆ.
ಮಂಡ್ಯದಲ್ಲಿ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದರು. ನಂತರ ಖರಡ್ಯ ಗ್ರಾಮದಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಚಾರಣೆಗೆ ಹಾಜರಾಗಲು ನಾನು ಮತ್ತು ಡಿ.ಕೆ.ಸುರೇಶ್ ಸಮಯಾವಕಾಶ ಕೇಳಿದ್ದೆವು.
ಭಾರತ್ ಜೋಡೋ ಯಾತ್ರೆ ( Bharat Jodo Yatra ) ಮುಗಿದ ಮೇಲೆ ಬರುತ್ತೇವೆ ಎಂದು ಕಾಲಾವಕಾಶ ಕೊಡಿ ಅಂತಾ ಕೇಳಿದ್ದೆವು. ಇವತ್ತು ಇಡಿಯವರು ಮತ್ತೊಂದು ನೋಟಿಸ್ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ನಿಮಗೆ ಆದೇಶ ಕೊಡುತ್ತಿದ್ದೇವೆ. ಹೀಗಾಗಿ ನಾಳೆ 10:30ಕ್ಕೆ ಇಡಿ ( ED ) ವಿಚಾರಣೆಗೆ ಹಾಜರಾಗುವಂತೆ 2ನೇ ನೋಟಿಸ್ ಕೊಟ್ಟಿದ್ದಾರೆ. ಈ ಬಗ್ಗೆ ಪಕ್ಷದ ಹಿರಿಯರ ಜೊತೆ ಚರ್ಚಿಸಿದ್ದೇವೆ.
ನಾವು ನಮ್ಮ ಪಕ್ಷ ಕಾನೂನಿಗೆ ಗೌರವ ಕೊಡುವವರು. ಕಾನೂನಿಗೆ ಅಗೌರವ ತೋರುವುದು ಸರಿಯಲ್ಲ. ಹೀಗಾಗಿ ನೋಟಿಸ್ಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು