ಬಾಲಕಿಯೊಬ್ಬಳಿಗೆ ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ ಪ್ರಕರಣದಲ್ಲಿ ಕಾಂತರಾಜು(52) ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.
ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು,ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ.ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್ ನಲ್ಲಿ ಕೆಲಸಕ್ಕಿದ್ದ ಕಾಂತರಾಜು.ಇದನ್ನು ಓದಿ –ನಾಳೆಯಿಂದ ಅ. 27ರವರೆಗೆ ಹಾಸನಾಂಬ ದೇವಾಲಯ ಓಪನ್ : ಭಕ್ತರ ದರ್ಶನಕ್ಕೆ ಅವಕಾಶ
ಮಳವಳ್ಳಿ ಪಟ್ಟಣದ ಎನ್ಇಎಸ್ ಬಡಾವಣೆಯ ನಿವಾಸಿ ದಿವ್ಯ(10)ಳಿಗೆ ಕರೆ ಮಾಡಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ ಗೆ ಬರುವಂತೆ ಕಾಂತರಾಜು ತಿಳಿಸಿದ್ದ.
ಬಾಲಕಿ ದಿವ್ಯ ಟ್ಯೂಷನ್ ಗೆ ಬಂದ ಸಂದರ್ಭದಲ್ಲಿ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅಲ್ಲಿದ್ದ ಗಲ್ಲಿಯಲ್ಲೇ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ.
ಪಟ್ಟಣದ ಎನ್ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ಎಂಬ ದಂಪತಿಯ ಪುತ್ರಿ ದಿವ್ಯಾ ಬೆಳಿಗ್ಗೆ 11 ಗಂಟೆಗೆ ಟ್ಯೂಶನ್ ಗೆ ಎಂದು ಮನೆಯಿಂದ ಹೋದವಳು ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿರಲಿಲ್ಲ.
ಟ್ಯೂಷನ್ ಸೆಂಟರ್ ನೋಡಿಕೊಂಡಿದ್ದ ಕಾಂತರಾಜು ಕೂಡ ನನಗೆ ಬಾಲಕಿ ದಿವ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿ ಆತನೂ ದಿವ್ಯಳ ಪಾಲಕರೊಂದಿಗೆ ಹುಡುಕಾಟ ನಡೆಸಿದ್ದ.
ಕೊನೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ಯಾರೋ ಒಬ್ಬರು ಬಾಲಕಿ ನೀರಿನ ಸಂಪ್ ನಲ್ಲಿ ಬಿದ್ದಿರುವ ಬಗ್ಗೆ ನೀಡಿದ ಮಾಹಿತಿ ಮೇರೆಗೆ ಪೋಲಿಸರು ನೀರಿನ ಸಂಪ್ ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿ ದಿವ್ಯಳ ಶವ ಪತ್ತೆಯಾಗಿತ್ತು.
ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ಸ್ಥಳಕ್ಕೆ ಡಿವೈಎಸ್ ಪಿ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ಕೂಡ ನಡೆಸಿದ್ದರು.ಬಾಲಕಿಯ ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಿ ಆರೋಪಿಯ ಪತ್ತೆಗೆ ಪೋಲಿಸರು ತನಿಖೆಗೆ ಮುಂದಾದರು.
ಎಸ್ಐಗಳಾದ ಶೇಷಾದ್ರಿ ಕುಮಾರ್, ಶ್ರೀಧರ್,ಅಶೋಕ್ ಅವರು ಟ್ಯೂಷನ್ ಸೆಂಟರ್ ನೋಡಿಕೊಳ್ಳುತ್ತಿದ್ದ ಕಾಂತರಾಜು ಹೇಳಿಕೆಗಳ ಮೇಲೆ ಅನುಮಾನ ಗೊಂಡಿದ್ದರು.ಅವನನ್ನು ಕರೆತಂದು ವಿಚಾರಣೆ ಮಾಡಿದ ಸಂದರ್ಭದಲ್ಲಿ ಆತನೇ ಬಾಲಕಿ ದಿವ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ನೀರಿನ ಸಂಪಿಗೆ ಹಾಕಿದ್ದ ಬಗ್ಗೆ ತಪ್ಪು ಒಪ್ಪಿಕೊಂಡಿದ್ದಾನೆ.
ಮಳವಳ್ಳಿ ಪಟ್ಟಣ ಠಾಣೆಯ ಪೋಲಿಸರು ಕಾಂತರಾಜು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು