ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯ ಆಪ್ತೆ ನಟಿ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ವೇಳೆ ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಯಿತು. ಇದರಿಂದ ತೀವ್ರ ಕೋಪ, ಬೇಸರಗೊಂಡ ರಮ್ಯಾ ವಾಪಸ್ ಹೋಗಿದ್ದಾರೆ.ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ – ವಿರಾಟ್ ರೂಪ ಪ್ರದರ್ಶನ : ಭಾರತಕ್ಕೆ ರೋಚಕ 4 ವಿಕೆಟ್ ಗೆಲುವು
ರಾಯಚೂರಿನ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ಸಂಜೆಯ ಸುಮಾರಿಗೆ ನಡೆದಿದ್ದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ಸಂಜೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯ, ಬಳಿಕ ರಾಹುಲ್ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಯಿತು. ಅತಿಥಿಗಳ ಪಟ್ಟಿಯಲ್ಲಿ ರಮ್ಯ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯ, ಕೆಲಹೊತ್ತು ಅಲ್ಲೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ