ರಾಮನಗರದ ಕಾಂಗ್ರೆಸ್ ಕಾರ್ಯಕರ್ತನ ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಹಣ ಮತ್ತು ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಆನೇಕಲ್ ರಸ್ತೆಯ ಕಾಡುಜಕ್ಕಸಂದ್ರದಲ್ಲಿ ನಡೆದಿದೆ.
ನಾಗರಾಜು (43) ಎಂಬುವವರೇ ತೀವ್ರವಾಗಿ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತ. ತೀವ್ರವಾಗಿ ಗಾಯಗೊಂಡ ನಾಗರಾಜು ಕನಕಪುರ ತಾಲೂಕಿನ ಶೆಟ್ಟಿಕೆರೆದೊಡ್ಡಿ ಗ್ರಾಮದ ನಿವಾಸಿ.ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿಗೆ ಯುವತಿಯಿಂದ ಹನಿಟ್ರ್ಯಾಪ್ ಯತ್ನ
1 ಲಕ್ಷದ 99 ಸಾವಿರ ರೂಪಾಯಿ ಹಣ ಹಾಗೂ 10 ಗ್ರಾಂ ಚಿನ್ನದ ಉಂಗುರವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
ಆನೇಕಲ್ ರಸ್ತೆಯ ಕಾಡುಜಕ್ಕಸಂದ್ರದ ಪಕ್ಕದಲ್ಲಿ ಆರೋಪಿಗಳ ಪೈಕಿ ಒಬ್ಬನಾದ ಶ್ರೀನಿವಾಸ್ ಎಂಬಾತನಿಗೆ ಸೇರಿದ ತೋಟದ ಮನೆಯಲ್ಲಿ ಈ ಕೃತ್ಯ ನಡೆದಿದೆ. ನಾಗರಾಜು ಅವರ ಕೈಕಾಲು ಕಟ್ಟಿ ಹಾಕಿ, ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು