March 12, 2026

Newsnap Kannada

The World at your finger tips!

pothole , accident , death

soldier was killed when he went to avoid a pothole and got under the wheels of a lorry ಮಂಡ್ಯದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಚಕ್ರದಡಿ ಸಿಕ್ಕಿ ಯೋಧ ಬಲಿ

ಮಂಡ್ಯದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಚಕ್ರದಡಿ ಸಿಕ್ಕಿ ಯೋಧ ಬಲಿ

Spread the love

ಮಂಡ್ಯದ ಕಾರೆಮನೆ ಗೇಟ್ ಬಳಿಯ ರಸ್ತೆ ಗುಂಡಿ ಗೆ ನಿವೃತ್ತ ಯೋಧ ಬಲಿಯಾಗಿರುವ ಘಟನೆ ಕಳೆದರಾತ್ರಿ ಜರುಗಿದೆ.

ಎಸ್.ಎನ್ ಕುಮಾರ್ (39) ಮೃತ ನಿವೃತ್ತ ಯೋಧ. ತಂದೆ ಜೊತೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಸಾತನೂರಿನಿಂದ ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅವಘಡ ಸಂಭವಿಸಿದೆ.ಒಕ್ಕಲಿಗರ ಮತಗಳು ಬಿಜೆಪಿಗೆ: ಆತಂಕ ಹೆಚ್ಚಿಸಿಕೊಂಡಿರುವ ಹೆಚ್ ಡಿ ಕೆ – ಸಿ.ಪಿ.ಯೋಗೇಶ್ವರ್

ಗುಂಡಿಯನ್ನು ತಪ್ಪಿಸಲು ಹೋಗಿ ಎದುರಿನಿಂದ ಬಂದ ಬೈಕ್‍ಗೆ ಡಿಕ್ಕಿ ಹೊಡೆದ ಕೆಳಗೆ ಬಿದ್ದ ಕುಮಾರ್ ಗೆ ಹಿಂದಿನಿಂದ ಬಂದ ಲಾರಿ ಕುಮರ್ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ. ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ನಿವೃತ್ತಿ ಬಳಿಕ ಪೊಲೀಸ್ ಪೇದೆಯಾಗಿ ತರಬೇತಿಗೆ ಹೋಗುತ್ತಿದ್ದರು. ನಿನ್ನೆ ಸ್ವಗ್ರಾಮ ಸಾತನೂರು ಗ್ರಾಮಕ್ಕೆ ಕುಮಾರ್ ಬಂದಿದ್ದ ವೇಳೆ ಈ ಘಟನೆ ಜರುಗಿದ್ದು, ಮಂಡ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!