ಖಾಸಗಿ ವಾಹಿನಿ ಕ್ಯಾಮೆರಾಮನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವಕನೊಬ್ಬ ಪತ್ನಿಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಎಪಿಎಂಸಿ ಬಳಿಯ ಕಟ್ಟಡದಲ್ಲಿ ತಡರಾತ್ರಿ ನಡೆದಿದೆ.
ಮುದ್ದೇಬಿಹಾಳದ ಕೊಣ್ಣೂರ ಗ್ರಾಮದ ತಿಪ್ಪಣ್ಣ ಹೊಸಮನಿ (34) ಮತ್ತು ಪತ್ನಿ ಸುಜಾತಾ (30) ಆತ್ಮಹತ್ಯೆ ಮಾಡಿಕೊಂಡ ದಂಪತಿ.ಕುಕ್ಕರ್ ಬಾಂಬರ್ ಶಾರೀಕ್ ನನ್ನೂ ಕೊಲ್ಲುವ ಸಂಚು: ಆಸ್ಪತ್ರೆಗೆ ಭಾರಿ ಭದ್ರತೆ
ಮೃತ ತಿಪ್ಪಣ್ಣ ಬೆಂಗಳೂರಿನ ಖಾಸಗಿ ವಾಹಿನಿಯೊಂದರಲ್ಲಿ ಕ್ಯಾಮೆರಾಮನ್ ಆಗಿ ಕೆಲಸ ಮಾಡುತ್ತಿದ್ದರು . ಇಬ್ಬರು ಮುದ್ದೇಬಿಹಾಳದ ಮನೆಯಲ್ಲಿರುವ ಅಕ್ಕ-ಪಕ್ಕದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದಂಪತಿಗಳು 22 ದಿನಗಳ ಹಿಂದಷ್ಟೇ (ನವೆಂಬರ್ 05 ರಂದು) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮುದ್ದೇಬಿಹಾಳದ ಕೆಸಾಪೂರ ಗ್ರಾಮಕ್ಕೆ ಸೇರಿದ್ದ ಸುಜಾತರನ್ನು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು.
ಆ ಬಳಿಕ ಮುದ್ದೇಬಿಹಾಳ ನಗರದಲ್ಲೇ ಮನೆ ಮಾಡಿಕೊಂಡು ದಂಪತಿ ವಾಸವಾಗಿದ್ದರು .ತಿಪ್ಪಣ್ಣ ಕೆಲ ತಿಂಗಳ ಹಿಂದಷ್ಟೇ ಕೆಲಸ ಬಿಟ್ಟು ಊರಿಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಮುದ್ದೇಬಿಹಾಳ ಪೊಲೀಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು