ವಿಷಪೂರಿತ ನೀರು ಕುಡಿದು ಮಕ್ಕಳು ಸೇರಿ 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗಾಗಿ ಬಳ್ಳಾರಿಯಿಂದ 30 ಜನರು ಬಂದಿದ್ದರು.ರಾಜ್ಯದ ಒಂದಿಂಚೂ ಜಾಗ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ : ಸಚಿವ ಜೋಶಿ
ಊಟದ ಬಳಿಕ ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಿಸಿದ ಡ್ರಮ್ ನಲ್ಲಿ ನೀರು ಕುಡಿದಿದ್ದಾರೆ.
ಮಕ್ಕಳು ಸೇರಿ 15ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ದುರಂತ ತಪ್ಪಿದೆ.
ಅಸ್ವಸ್ಥಗೊಂಡ 15 ಜನರು ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ. ಕ್ರಿಮಿನಾಶಕ ಸಿಂಪಡಿಸಿದ ಡ್ರಮ್ ನಲ್ಲಿ ನೀರು ಕುಡಿದಿದ್ದರಿಂದ ಅಸ್ವಸ್ಥಗೊಂಡಿದ್ದಾರೆ.