ಸಿಎಂ ಅಂಕಲ್ ನಾವು ಶಾಲೆಗೆ ಹೋಗಬೇಕು ಅಂದ್ರೆ 6ಕಿಮಿ ಕಾಡಿನಲ್ಲಿ ನಡೆದುಕೊಂಡು ಹೋಗಬೇಕು. ನಮ್ಮೂರಿಗೆ ಬಸ್ ಹಾಕಿಸಿ ಎಂದು ಮುಖ್ಯಮಂತ್ರಿ ಬೊಮ್ಮಯಿಗೆ ಚಾಮರಾಜನಗರ ಜಿಲ್ಲೆ ಗಡಿ ಭಾಗದ ಬುಡಕಟ್ಟು ಸೋಲಿಗ ಮಕ್ಕಳ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು: ತಪ್ಪಿದ ಅನಾಹುತ
ಹನೂರು ತಾಲೂಕು ಅರೆಕಡುವಿನದೊಡ್ಡಿ, ಕಂಬಿದೊಡ್ಡಿ ಸೋಲಿಗರ ಮಕ್ಕಳು, ಸಿಎಂ ಅಂಕಲ್ ನಾವು ಶಾಲೆಗೆ ಹೋಗಬೇಕು ಬಸ್ ಕಳಿಸಿಕೊಡಿ ಪ್ಲೀಸ್. ಬಸ್ ಹಾಕಲಿಲ್ಲ ಅಂದರೆ ನಾವು ಸ್ಕೂಲಿಗೆ ಹೋಗಲ್ಲ. ನೀವು ನಾಳೆ ಹನೂರಿಗೆ ಬಂದಾಗ ನಮಗೆ ಬಸ್ ಸೌಲಭ್ಯದ ಘೋಷಣೆ ಮಾಡಿ. ಇಲ್ಲಾ ಅಂದ್ರೆ ನಾವು ಶಾಲೆಗೆ ಹೋಗಲ್ಲ. ದಿನಾ ಮೂರರಿಂದ ಆರು ಕಿಲೋಮೀಟರ್ ಮೀಟರ್ ನಡೀಬೇಕು ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಬ್ಯಾಗ್ ಹೊತ್ತೊಕೊಂಡು ಹೋಗುತ್ತಾ 3 ಕಿಲೋ ಮೀಟರ್, ಬರ್ತಾ 3 ಕಿಲೋ ಮೀಟರ್ ನಡೀಬೇಕು. ಸುತ್ತ ಕಾಡಿರೋದ್ರಿಂದ ಕಾಡು ಪ್ರಾಣಿಗಳ ಭಯ ಇದೆ. ಮಳೆ ಬಂದರೆ ಬ್ಯಾಗು, ಬಟ್ಟೆ ಎಲ್ಲ ಹಾಳಾಗುತ್ತೆ. ಇಲ್ಲಿ ರಸ್ತೆ ಚೆನ್ನಾಗಿದೆ. ಆದರೆ ಬಸ್ ಮಾತ್ರ ಬರೋದಿಲ್ಲ. ಹನೂರಿಗೆ ಬಂದಾಗ ಬಸ್ ಸೌಲಭ್ಯ ಘೋಷಣೆ ಮಾಡಿ ಕೊಡಿ ಎಂದು ಮಕ್ಕಳು ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು