ವಿಧಾನಸೌಧದಲ್ಲಿ ಮಂಡ್ಯದ ವ್ಯಕ್ತಿಯ 10.5 ಲಕ್ಷ ಹಣ ವಶ : PWD ಇಂಜಿನಿಯರ್ ಬಂಧನ

Team Newsnap
1 Min Read

ಬೆಂಗಳೂರಿನ ವಿಧಾನಸೌಧದಲ್ಲಿ ದಾಖಲೆ ಇಲ್ಲದ ಹಣ ಸಾಗಾಟ ಮಾಡ್ತಿದ್ದ ಲೋಕೊಪಯೋಗಿ ಇಲಾಖೆಯ ಅಧಿಕಾರಿ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪಿಡಬ್ಲ್ಯೂಡಿ ಜ್ಯೂನಿಯರ್ ಇಂಜಿನಿಯರ್ ಜಗದೀಶ್ ಪೊಲೀಸ್ ಅಧಿಕಾರಿಗಳ ವಶದಲ್ಲಿದ್ದಾರೆ.ಬೆಳಗಾವಿ : ಯಲ್ಲಮ್ಮನ ದರ್ಶನಕ್ಕೆ ಹೊರಟ ವಾಹನ ಭೀಕರ ಅಪಘಾತ; 6 ಮಂದಿ ಸಾವು

ಬುಧವಾರ ಸಂಜೆ ಮಂಡ್ಯ ಮೂಲದ ಜಗದೀಶ್ 10 ಲಕ್ಷ ರೂಪಾಯಿ ಹಣದೊಂದಿಗೆ ವಿಧಾನಸೌಧಕ್ಕೆ ಪ್ರವೇಶ ಮಾಡಿದ್ದರು. ಈ ವೇಳೆ ಈಸ್ಟ್ ಗೇಟ್​ನಲ್ಲಿ ಬ್ಯಾಗ್​​ ಪರಿಶೀಲನೆ ನಡೆಸಿದಾಗ 10.5 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಕೂಡಲೇ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು, ತನಿಖೆ ನಡೆಸಿ ಕೋರ್ಟ್​​ಗೆ ಒಪ್ಪಿಸಿದ್ದಾರೆ.

ತನಿಖೆ ವೇಳೆ ಸಚಿವರೊಬ್ಬರನ್ನು ಭೇಟಿ ಮಾಡಲು ಜಗದೀಶ್ ಬರುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ. ಆರೋಪಿ ಎಂಜಿನಿಯರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

Share This Article
Leave a comment