ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸುವ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಈ ಘಟನೆಗಳು ನಡೆದಿದೆ.ರಾಜ್ಯದಲ್ಲಿ ವಿದ್ಯುತ್ ದರ ಭಾರಿ ಏರಿಕೆ ಸಾಧ್ಯತೆ
ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದ ಅವಘಡದಲ್ಲಿ ರಂಗನಾಥ್ ಎಂಬುವವರು ಹೋರಿ ತಿವಿದು ಮೃತಪಟ್ಟಿದ್ದಾರೆ. ಮಾಳೂರಿನಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದಾರೆ
ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಸ್ಪರ್ಧೆ ಬಹಳ ಅಪಾಯಕಾರಿಯಾಗಿದೆ ಎನ್ನುವುದಕ್ಕೆ ಈ ಘಟನೆಗಳು ಸಾಕ್ಷಿಯಾಗಿವೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ