ಮಂಡ್ಯ ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.
ಚಿನ್ನರಾಜ್ ಎಂಬಾತನ ಮೇಲೆ ನಂದನ್ ಎಂಬುವವನು ಕುಡುಗೋಲಿನಿಂದ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಚಿನ್ನರಾಜ್ ಕಣ್ಣಿಗೆ ಖಾರದ ಪುಡಿ ಎರಚಿ 40 ಕ್ಕೂ ಹೆಚ್ಚು ಬಾರಿ ನಂದನ್ ಹಲ್ಲೆ ನಡೆಸಿದ್ದು, ಚಿನ್ನರಾಜ್ ಸ್ಥಿತಿ ಗಂಭೀರವಾಗಿದೆ.
ಜಮೀನು ವ್ಯಾಜ್ಯ ಹಿನ್ನೆಲೆ ಇಬ್ಬರು ತಾಲೂಕು ಕಚೇರಿಗೆ ಬಂದಿದ್ದರು. ಚಿನ್ನರಾಜ್ ಪರ ತೀರ್ಪು ನೀಡುತ್ತಿದ್ದಂತೆ ಈ ವಿಚಾರಕ್ಕೆ ಪರಸ್ಪರ ಜಗಳ ನಡೆದಿದೆ. ಅಲ್ಲಿದ್ದವರೂ ಬಿಡಿಸಲು ಪ್ರಯತ್ನಿಸಿದರೂ ಆಗಲಿಲ್ಲ, ಬಳಿಕ ನಂದನ್ ಮೇಲೆ ಕಲ್ಲು ತೂರಿ ಚಿನ್ನರಾಜ್ ನನ್ನು ರಕ್ಷಿಸಲಾಗಿದೆ. ಕಲ್ಲು ತೂರಿದ್ದರಿಂದ ನಂದನ್ ಕೂಡ ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು