ಟಿ ನರಸೀಪುರ ಸುತ್ತ ಹೆಚ್ಚಾಗಿರುವ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಲು ಮೈಸೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸಚಿವ ಎಸ್.ಟಿ ಸೋಮಶೇಖರ್ ಮಂಗಳವಾರ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಚಿರತೆ ದಾಳಿಗೆ ಮೃತರಾದ ಕನ್ನನಾಯಕನಹಳ್ಳಿಯ ಸಿದ್ದಮ್ಮ ಹಾಗೂ ಹೊರಳಹಳ್ಳಿಯ ಜಯಂತ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮಾತನಾಡಿದ ಸಚಿವರು ಇಂತಹ ಘಟನೆ ನಡೆಯಬಾರದಿತ್ತು, ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಲು ಮೈಸೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ 11 ವರ್ಷದ ಬಾಲಕ ಸಾವನ್ನಪ್ಪಿದ್ದನು. ಜಯಂತ್ ಮೃತ ಬಾಲಕ ನಾಪತ್ತೆಯಾಗಿದ್ದನು. ಬಳಿಕ ಗ್ರಾಮದ ಹೊರವಲಯದಲ್ಲಿ ರುಂಡವಿಲ್ಲದೆ ಬಾಲಕನ ಶವ ಪತ್ತೆಯಾಗಿದೆ. ರಾತ್ರಿ ಬಾಲಕನನ್ನು ಚಿರತೆ ಹೊತ್ತೊಯ್ದಿತ್ತು.ಇದಲ್ಲದೇ ಇತ್ತೀಚೆಗೆ ಸೌದೆ ತರಲು ಹೋಗಿದ್ದ 60 ವರ್ಷದ ವೃದ್ದೆ ಮೇಲೆ ಕೂಡ ಚಿರತೆ ದಾಳಿ ನಡೆಸಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ