2023-24ನೇ ಸಾಲಿನ ಕೇಂದ್ರ ಬಜೆಟ್ ನಾಳೆ (ಫೆ. 1)ಮಂಡನೆಯಾಗಲಿದೆ ಪ್ರಧಾನಿ ಮೋದಿ ನೇತೃತ್ವದ 2ನೇ ಅವಧಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದು. ಬೆಟ್ಟದಷ್ಟು ನಿರೀಕ್ಷೆ ಇದೆ. ಅದರಲ್ಲೂ ಮಧ್ಯಮ ವರ್ಗದ ಜನ ಈ ಬಜೆಟ್ನತ್ತ ದೃಷ್ಟಿ ನೆಟ್ಟು ಕೂತಿದ್ದಾರೆ.
ಕೇಂದ್ರ ಬಜೆಟ್ ಮಂಡನೆಗೆ ಒಂದೇ ದಿನ ಬಾಕಿ ಉಳಿದಿದೆ. ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಲೋಕಸಭೆ, ರಾಜ್ಯಸಭೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ.
ಬಜೆಟ್ ಅಧಿವೇಶನದ ಮೊದಲ ದಿನ, ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಸಂಸತ್ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು, ನಾಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ 5ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಮೋದಿ ಸರ್ಕಾರದ 2ನೇ ಅವಧಿಯ 5ನೇ ಮತ್ತು ಕೊನೆ ಪೂರ್ಣ ಬಜೆಟ್ ಆಗಿರಲಿದೆ. ಹೀಗಾಗಿ ಹಲವು ಜನಪರ ಯೋಜನೆಗಳು ಪ್ರಕಟಿಸುವ ಸಾಧ್ಯತೆ ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮುಂಗಡಪತ್ರ ಮಂಡಿಸಲಿದ್ದಾರೆ. 2023-24ರ ಬಜೆಟ್, ಮುಂಬರುವ ಲೋಕಸಭೆ ಎಲೆಕ್ಷನ್ಗೆ ಪೂರಕವಾಗಿ ಸಿದ್ಧಗೊಂಡಿರಲಿದೆ ಎಂದು ಅಂದಾಜಿಸಲಾಗುತ್ತಿದೆ ಅಲ್ಲದೆ, ದೇಶದ 9 ರಾಜ್ಯಗಳ ವಿಧಾನಸಭೆ ಚುನವಣೆಯ ಮೇಲೂ ಬಜೆಟ್ ಕೇಂದ್ರೀಕೃತವಾಗಿರಲಿದೆ.
ಇಂದಿನಿಂದ ಆರಂಭವಾಗುವ ಅಧಿವೇಶನ, ಫೆಬ್ರವರಿ 13ರ ವರೆಗೆ ಮುಂದುವರಿಯುವ ಸಾಧ್ಯತೆಯಿದೆ.ರಾಜ್ಯದಲ್ಲಿ 13 ಐಪಿಎಸ್ ಅಧಿಕಾರಿಗಳು ವರ್ಗಾವಣೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ