ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು. ಮೃತ ದುರ್ವೈವಿಗಳು.30 ವರ್ಷವಾದ್ರೂ ವಧು ಕರುಣಿಸದ ‘ಮಾದಪ್ಪನ ಕಡೆ ಬ್ರಹ್ಮಚಾರಿಗಳ ನಡೆ’
ಇಂದು ಬೆಳಗ್ಗೆ ಕೂಡ್ಲುರು ಗ್ರಾಮದ ಬಳಿ ಮಾವಿನತೋಪು ಸಮೀಪ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.
ಕೂಡ್ಲುರು ನಿವಾಸಿ ಕೂಲಿ ಕಾರ್ಮಿಕ ನಾಗರಾಜ್ ಎಂಬವರ ಪುತ್ರ ಪೃಥ್ವಿ, ಆಟೋ ಚಾಲಕ ಸತೀಶ್ ಎಂಬವರ ಪುತ್ರ ಪ್ರಜ್ವಲ್ ಇಬ್ಬರು ಸಂಬಂಧದಲ್ಲಿ ಸಹೋದರರಾಗಿದ್ದರು.