ಹಾಸನ ಜಿಲ್ಲೆಯ ಬೇಲೂರಿನ ಬೇಲೂರಿನ ದೇಗುಲ ಯುನೆಸ್ಕೋ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲು ಬೇಕಾದ ಇತಿಹಾಸದ ದಾಖಲೆಗಳನ್ನು ನೀಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೇಲೂರು ಕರ್ನಾಟಕದ ಹೆಮ್ಮೆ, ಇಲ್ಲಿನ ಕಲೆ ಪ್ರಸಿದ್ದಿ ಪಡೆದಿದೆ.ಅಧಿಕೃತವಾಗಿ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದರೆ ಅನುಕೂಲವಾಗುತ್ತದೆ ಎಂದರು.
ವಿದೇಶದಿಂದ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಾರೆ. ಹಂಪಿ ಬಳಿಕ ಯುನೆಸ್ಕೋ ಪಟ್ಟಿಗೆ ಬೇಲೂರಿನ ದೇಗುಲ ಸೇರ್ಪಡೆಯಾಗಲಿದೆ. ಈ ಮೂಲಕ ಬೇಲೂರು, ಹಳೇಬೀಡು ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ.