ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಬಳಿ ಜರುಗಿದೆ.
ಶಂಭು ಭಟ್ (65) ಆತನ ಪತ್ನಿ ಮಾದೇವಿ ಭಟ್, ಮಗ ರಾಜೀವ್ ಭಟ್ (34) ಹಾಗೂ ಮಗನ ಪತ್ನಿ ಕುಸುಮಾ ಭಟ್ (30) ಕೊಲೆಯಾದವರು.ಧಾರವಾಡದಲ್ಲಿ ದುರಂತ : ಲಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಐವರ ಸಾವು
ಕುಸುಮಾ ಭಟ್ ದಂಪತಿಯ ಚಿಕ್ಕ ಹೆಣ್ಣು ಮಗು ಅಂಗನವಾಡಿಗೆ ಹೋಗಿದ್ದರಿಂದ ಬದುಕುಳಿದಿದೆ.
ಶ್ರೀಧರ್ ಭಟ್, ವಿನಯ್ ಭಟ್, ವಿದ್ಯಾ ಭಟ್ ಆಕೆಯ ತಂದೆ ಹಾಗೂ ಸಹೋದರರಿಂದ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ.
ಶಂಭು ಭಟ್ ಅವರ ಮೊದಲ ಮಗ ಕಿಡ್ನಿ ವೈಫಲ್ಯದಿಂದ ಸಾವಾಗಿದ್ದರಿಂದ ಸೊಸೆ ವಿದ್ಯಾ ಭಟ್ ತವರು ಮನೆ ಸೇರಿದ್ದಳು. ಜೀವನಾಂಶ ಹಾಗೂ ಆಸ್ತಿ ನೀಡುವ ವಿಚಾರದಲ್ಲಿ ಶಂಭು ಭಟ್ರೊಂದಿಗೆ ವಿದ್ಯಾ ಭಟ್ ಕುಟುಂಬಸ್ಥರು ಗಲಾಟೆ ಮಾಡಿಕೊಂಡಿದ್ದರು.
ಜೀವನಾಂಶ ಕೊಡಲು ನಿರಾಕರಿಸಿದ್ದರಿಂದ ರೊಚ್ಚಿಗೆದ್ದ ಹಿರಿಯ ಸೊಸೆ ಕುಟುಂಬದವರಿಂದ ಹತ್ಯೆ ಮಾಡಿಸಿ ಪರಾರಿಯಾಗಿದ್ದಾಳೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು