ಬೆಂಗಳೂರು – ಮೈಸೂರು ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಂಡ್ಯದ ಗೆಜ್ಜಲಗೆರೆ ಬಳಿ ನಡೆಯಲಿರುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ.ಬೆಂಗಳೂರಲ್ಲಿ ಮನೆ ಮಾಡಲು ಅಮಿತ್ ಷಾ ಸಿದ್ದತೆ
ಅದೇ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮೈಸೂರಿನಿಂದ ಕುಶಾಲನಗರದವರೆಗಿನ ಉದ್ದೇಶಿತ ಚತುಷ್ಪಥ ಎಕ್ಸ್. ಪ್ರೆಸ್ ರಸ್ತೆಗೂ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಈ ಯೋಜನೆ ಪೂರ್ಣಗೊಂಡಿರುವುದರಿಂದ, ಅವರೇ ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವುದು ಸೂಕ್ತ” ಎಂದು ಸಿಂಹ ಹೇಳಿದರು.
ನೀವು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ, 2029 ರವರೆಗೆ ಮೋದಿ ನಾಯಕತ್ವದಲ್ಲಿ ಸಂಸದರಾಗಿ ಮುಂದುವರಿಯಲು ಬಯಸುತ್ತೇನೆ ಎಂದು ಹೇಳಿದರು.
ನಾನು ಇಲ್ಲಿಗೆ ಬಂದಿರುವುದು ದೀರ್ಘಾವಧಿಯ ರಾಜಕೀಯ ಮಾಡಲು ಅಲ್ಲ ಆದರೆ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು 15 ವರ್ಷಗಳ ಅವಧಿಯಲ್ಲಿ ಇತರ ಕ್ಷೇತ್ರಗಳಿಗೆ ಮಾದರಿಯಾಗಲು ಎಂದಿದ್ದಾರೆ.
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ