ಭಾರಿ ವಿವಾದ, ಕುತೂಹಲ ಮೂಡಿಸಿರುವ ಹಾಸನ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಬೆಂಗಳೂರಿನ ಜೆಪಿ ಭವನದಲ್ಲಿ ಇಂದು ಕರೆಯಲಾಗಿದ್ದ ಹಾಸನ ಜೆಡಿಎಸ್ ಮುಖಂಡರ ಸಭೆಯನ್ನು ವರಿಷ್ಠ ದೇವೇಗೌಡರು ಕೊನೆಯ ಕ್ಷಣದಲ್ಲಿ ರದ್ದು ಮಾಡಿದ್ದಾರೆ.
ಜೆಡಿಎಸ್ ನ ಹಾಸನ ಟಿಕೆಟ್ ಗಾಗಿ ದೇವೇಗೌಡರ ಕುಟುಂಬದಲ್ಲೇ ಭಾರಿ ಪೈಪೋಟಿ ನಡೆದಿದೆ. ಭವಾನಿ ರೇವಣ್ಣ ಟಿಕೆಟ್ ಗಾಗಿ ಕಸರತ್ತು ನಡೆಸಿದರೆ , ಮಾಜಿ ಸಿಎಂ ಕುಮಾರಸ್ವಾಮಿ ಭವಾನಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಕೊಡುವುದಾಗಿ ಹೇಳಿಕೆ ನೀಡಿರುವುದು ಭವಾನಿ ಕನಸಿಗೆ ತಣ್ಣೀರು ಎರಚಿದ್ದಾರೆ.
ಈ ನಡುವೆ ಎಚ್ ಡಿ ರೇವಣ್ಣ , ಸ್ವರೂಪ್ ರೇವಣ್ಣ ಕೂಡ ಟಿಕೆಟ್ ಗಾಗಿ ಭಾರಿ ಲಾಭಿ ನಡೆಸಿರುವುದು ಗೌಡರ ಕುಟುಂಬಕ್ಕೆ ಬಿಸಿ ತುಪ್ಪವಾಗಿದೆ.
ನಿನ್ನೆ ದಿನ ರೇವಣ್ಣ ದೇವೇಗೌಡರನ್ನು ಭೇಟಿ ಮಾಡಿ ಹಾಸನದ ಬೆಳವಣಿಗೆ ಹಾಗೂ ವಿದ್ಯಮಾನಗಳನ್ನು ಚರ್ಚೆ ಮಾಡಿದ ನಂತರ ದೇವೇಗೌಡರು ಸಭೆ ರದ್ದು ಮಾಡಿದ್ದಾರೆ.
ನಾನೇ ಹಾಸನಕ್ಕೆ ಬಂದು ಮುಖಂಡರ ಸಭೆ ನಡೆಸುತ್ತೇನೆ. ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ದೇವೇಗೌಡರು ರೇವಣ್ಣನಿಗೆ ಹೇಳಿದ್ದಾರೆ.
ಚಿಕ್ಕಮಂಗಳೂರಿನ ಪ್ರವಾಸದಲ್ಲಿ ಇರುವ ಮಾಜಿ ಸಿಎಂ ಕುಮಾರಸ್ವಾಮಿ ಸಭೆ ರದ್ದಾಗಿರುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ